Webdunia - Bharat's app for daily news and videos

Install App

ಸೋಶಿಯಲ್ ಮೀಡಿಯಾದಲ್ಲಿ ಎಂ.ಬಿ.ಪಾಟೀಲ ಮತ್ತು ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; ವ್ಯಕ್ತಿಯ ವಿರುದ್ಧ ದೂರು ದಾಖಲು

Webdunia
ಗುರುವಾರ, 21 ಮಾರ್ಚ್ 2019 (09:47 IST)
ಬೆಳಗಾವಿ : ಸೋಶಿಯಲ್ ಮೀಡಿಯಾದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಗೋಕಾಕ್‌ ಪಟ್ಟಣದ ಕೊಟ್ರೇಶ್‌ ಪಟ್ಟಣಶೆಟ್ಟಿ ಎಂಬುವರ ವಿರುದ್ಧ ದೂರು ದಾಖಲಾಗಿದೆ.


ಗೋಕಾಕ್‌ ಪಟ್ಟಣದ ಕೊಟ್ರೇಶ್‌ ಪಟ್ಟಣಶೆಟ್ಟಿ ಎಂಬುವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ''ಧರ್ಮ ಒಡೆದು ಪರಸ್ಪರ ಸಮುದಾಯಗಳಲ್ಲಿ ಜಗಳ ಹಚ್ಚಿದ ಮಾತೆ ಮಹಾದೇವಿ ಈಗಾಗಲೇ ತಕ್ಕ ಶಿಕ್ಷೆ ಅನುಭವಿಸಿದ್ದಾರೆ. ಅದೇ ರೀತಿ ತಪ್ಪು ಮಾಡಿರುವ ಗೃಹ ಸಚಿವ ಎಂ.ಬಿ.ಪಾಟೀಲ ಮತ್ತು ಸಿದ್ದರಾಮಯ್ಯ ಅವರನ್ನೂ ಮಾತೆ ಮಹಾದೇವಿ ಬೇಗ ತಮ್ಮ ಬಳಿಗೆ ಕರೆಸಿಕೊಳ್ಳಲಿ'', ಎಂದು ಪೋಸ್ಟ್ ಮಾಡಿದ್ದರು.


ಈ ಸಂಬಂಧ ಬೆಳಗಾವಿಯ ನ್ಯಾಯವಾದಿ ಆರ್‌.ಪಿ.ಪಾಟೀಲ ಮಾ.18ರಂದು ಜಿಲ್ಲಾ ಪೊಲೀಸ್‌ ವರಿಷ್ಠರ ಮೂಲಕ ದೂರು ದಾಖಲಿಸಿದ್ದರು. ಅವಹೇಳನಕಾರಿ ಪೋಸ್ಟ್‌ ಮಾಡಿದ ಯುವಕನ ಮೊಬೈಲ್‌ ವಶಪಡಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪ ಸಾಬೀತಾದರೇ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments