Select Your Language

Notifications

webdunia
webdunia
webdunia
webdunia

ಅಭಿಷೇಕ್ ಆತ್ಮಹತ್ಯೆ ಪ್ರಕರಣ: ಎಸ್‌ಪಿ, ಐಜಿ ನೇತೃತ್ವದಲ್ಲಿ ತನಿಖೆ ಎಂದ ಪರಮೇಶ್ವರ್

ಎಬಿವಿಪಿ
ಮಂಗಳೂರು , ಗುರುವಾರ, 12 ಜನವರಿ 2017 (17:37 IST)
ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಆತ್ಮಹತ್ಯೆ ಪ್ರಕರಣವನ್ನು ಎಸ್‌ಪಿ, ಐಜಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. 
 
ಶೃಂಗೇರಿಯ ರಾಮಕೃಷ್ಣ ಮಠದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾದವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಆತ್ಮಹತ್ಯೆ ಪ್ರಕರಣದ ತನಿಖೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. 
 
ಪೊಲೀಸರ ವೇತನ ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು, ವೇತನ ಆಯೋಗಕ್ಕೆ ವರದಿ ಸಲ್ಲಿಸಿದ್ದು, ವರದಿ ಬಂದ ತಕ್ಷಣವೇ ವೇತನ ಹೆಚ್ಚಳದ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. 
 
ನವರಿ 7 ರಂದು ಶೃಂಗೇರಿಯಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆ ಅವರು ಬರಬೇಕಿತ್ತು. ಆದರೆ, ಅವರು ಬರದಂತೆ ಎನ್‌ಎಸ್‌ಯುಐ ಸುದ್ದಿಗೋಷ್ಠಿ ನಡೆಸಿತ್ತು. ಹೀಗಾಗಿ ಎಬಿವಿಪಿ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು ಎಂದು ಹೇಳಾಗುತ್ತಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಳಸಾ ಬಂಡೂರಿ ಹೋರಾಟದಲ್ಲಿ ಭಾಗಿಯಾದ ರೈತರ ಗಡಿಪಾರ ಮಾಡಲ್ಲ: ಸಿಎಂ ಸಿದ್ದರಾಮಯ್ಯ