Select Your Language

Notifications

webdunia
webdunia
webdunia
webdunia

ಡೆತ್‌‍‌ನೋಟ್ ಬರೆದಿಟ್ಟು ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು

ಡೆತ್‌‍‌ನೋಟ್ ಬರೆದಿಟ್ಟು ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು
ಚಿಕ್ಕಮಗಳೂರು , ಬುಧವಾರ, 11 ಜನವರಿ 2017 (11:42 IST)
ಡೆತ್‌‍‌ನೋಟ್ ಬರೆದಿಟ್ಟು ಎಬಿವಿಪಿ ಕಾರ್ಯಕರ್ತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ. 
ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಅಭಿಷೇಕ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಜನವರಿ 7 ರಂದು ಶೃಂಗೇರಿಯಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆ ಅವರು ಬರಬೇಕಿತ್ತು. ಆದರೆ, ಅವರು ಬರದಂತೆ ಎನ್‌ಎಸ್‌ಯುಐ ಸುದ್ದಿಗೋಷ್ಠಿ ನಡೆಸಿತ್ತು. ಹೀಗಾಗಿ ಎಬಿವಿಪಿ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು ಎಂದು ಹೇಳಾಗುತ್ತಿದೆ. 
 
ಗಲಾಟೆಗೆ ಸಂಬಂಧಿಸಿದಂತೆ ಎಬಿವಿಪಿ ನಾಲ್ವರ ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿತ್ತು. ಈ ನಾಲ್ವರಲ್ಲಿ ಅಭಿಷೇಕ್ ಕೂಡಾ ಒಬ್ಬನಾಗಿದ್ದ. ಹೀಗಾಗಿ 'ನನ್ನ ಜೀವನ ಹಾಳಾಯ್ತು' ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
 
ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪೆಟ್ರೋಲ್ ಬಂಕ್‌ಗಳಲ್ಲಿ ಮೊಬಿಕ್ವಿಕ್ ವಿಶೇಷ ಆಫರ್