Webdunia - Bharat's app for daily news and videos

Install App

ಸಂಪೂರ್ಣ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಎಬಿವಿಪಿ ಮನವಿ

Webdunia
ಸೋಮವಾರ, 9 ಆಗಸ್ಟ್ 2021 (18:56 IST)

ಈ ಬಗ್ಗೆ ಸಂಘಟನೆಯ ಪದಾಧಿಕಾರಿಗಳು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ಶಿಕ್ಷಣ ನೀತಿಯ ಬಗ್ಗೆ ಕೆಲವರು ಹಬ್ಬಿಸುತ್ತಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಕೂಡಲೇ ಇಡೀ ನೀತಿಯ ವಿವರಗಳನ್ನು ರಾಜ್ಯದ ಜನತೆಯ ಮುಂದಿಡಬೇಕು ಎಂದು ಕೋರಿದರು. ಇದಕ್ಕೆ ಸಚಿವರು ಸಮ್ಮತಿಸಿದರು.

ಎಬಿವಿಪಿ ಮಾಡಿರುವ ಎಲ್ಲ ಮನವಿಗಳನ್ನು ಪರಿಶೀಲಿಸಿ ಶೀಘ್ರವೇ ಕ್ರಮ ವಹಿಸಲಾಗುವುದು ಎಂದ ಡಾ.ಅಶ್ವತ್ಥನಾರಾಯಣ ಅವರು ತಮ್ಮನ್ನು ಭೇಟಿ ಮಾಡಿದ ಎಬಿವಿಪಿ ವಲಯ ಸಂಘಟನಾ ಕಾರ್ಯದರ್ಶಿ ಸ್ವಾಮಿ ಮರಳಾಪುರ, ರಾಷ್ಟ್ರೀಯ ಕಾರ್ಯದರ್ಶಿ ಹರ್ಷ, ರಾಜ್ಯ ಘಟಕದ ಅಧ್ಯಕ್ಷ ಡಾ.ಸತೀಶ, ರಾಜ್ಯ ಕಾರ್ಯದರ್ಶಿ ಪ್ರತೀಕ್ ಮಾಳಿ ಅವರಿಗೆ ಭರವಸೆ ನೀಡಿದರು.

ಇದಲ್ಲದೆ, ಕೋವಿಡ್‌ನಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳ ಶುಲ್ಕ ಮನ್ನಾ ಮಾಡಬೇಕು, ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿರುವ ಖಾಲಿ ಬೋಧಕ ಹುದ್ದೆಗಳನ್ನು ಭರ್ತಿ ಮಾಡಬೇಕು, ಸರಕಾರಿ ಕಾಲೇಜುಗಳಲ್ಲಿಯೂ ಪದವಿ ಪ್ರವೇಶ ಪ್ರಕ್ರಿಯೆ ಆರಂಭ ಮಾಡಬೇಕು, ಕಾಲೇಜು ಗ್ರಂಥಾಲಯಗಳಿಗೆ ನೀಡುತ್ತಿರುವ ಅನುದಾನವನ್ನು ಬಿಡುಗಡೆ ಮಾಡಬೇಕು, ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕ್ರೀಡಾ ಮತ್ತು ಶಾರೀರಕ ತರಬೇತಿಗಾಗಿ ಪ್ರತಿ 50 ವಿದ್ಯಾರ್ಥಿಗಳಿಗೆ ಒಬ್ಬರಂತೆ ತರಬೇತಿದಾರರನ್ನು ನೇಮಕ ಮಾಡಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಡಾ.ಅಶ್ವತ್ಥನಾರಾಯಣ ಅವರು, ಈಗಾಗಲೇ ಈ ಬೇಡಿಕೆಗಳನ್ನು ಈಡೇರಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಸಾಧಾರಣ ಮಳೆ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments