Webdunia - Bharat's app for daily news and videos

Install App

ಜಿಲ್ಲಾಧಿಕಾರಿಗಳ ಹಾಡಿಗೆ ಎಸಿ, ತಹಶೀಲ್ದಾರ್ ಗಳ ಟಪ್ಪಾಂಗೊಚಿ

Webdunia
ಸೋಮವಾರ, 26 ಡಿಸೆಂಬರ್ 2022 (20:26 IST)
ಕಂದಾಯ ಇಲಾಖೆಯ ವತಿಯಿಂದ ತರೀಕೆರೆ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯ ಮೇಲೆ ಜಿಲ್ಲಾಧಿಕಾರಿ‌ ಕೆ.ಎನ್ ರಮೇಶ್ ಡಾ. ರಾಜ್ ಕುಮಾರ್ ಅವರ ಹೊಸ ಬೆಳಕು ಮೂಡುತಿದೆ ಹಾಡನ್ನು ಹೇಳಿದ್ದು, ಉಪವಿಭಾಗಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಕುಣಿದು ಕುಪ್ಪಳಿಸಿದ್ದಾರೆ. 
 
ತರೀಕೆರೆ ಪಟ್ಟಣದಲ್ಲು ನಡೆದ ಸರ್ಕಾರಿ‌ ನೌಕರರ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳು ಹಾಡು ಹೇಳಲು ಆರಂಭಿಸುತ್ತಿದ್ದಂತೆ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ರಾಜೇಶ್, ತರೀಕೆರೆ ಉಪವಿಭಾಗಾಧಿಕಾರಿ ಸಿದ್ದಲಿಂಗಾರೆಡ್ಡಿ, ತರೀಕೆರೆ ತಹಶೀಲ್ದಾರ್ ಪೂರ್ಣಿಮಾ‍, ಚಿಕ್ಕಮಗಳೂರು ತಹಶೀಲ್ದಾರ್ ವಿನಯ್ ಸಾಗರ್ ಸೇರಿದಂತೆ ಬಹುತೇಕ ಕಂದಾಯ ಇಲಾಖೆಯ ಅಧಿಕಾರಿಗಳು ಕುಣಿದು ಕುಪ್ಪಳಿಸಿದ್ದಾರೆ.ಪ್ರತಿನಿತ್ಯ ಕೆಲಸದ ಒತ್ತಡ ಹಾಗೂ ಜಂಜಾಟದಲ್ಲಿಯೇ ದಿಬ ಕಳೆಯುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಹಾಡಿದ ಹಾಡು ಅಧಿಕಾರಿಗಳಲ್ಲಿ ಹೊಸ ಹುಮ್ಮಸನ್ನು ಮೂಡಿಸಿದ್ದು, ಒತ್ತಡದ ನಡುವೆಯೂ ಕುಣಿದು ಕುಪ್ಪಳಿಸಿದ್ದಾರೆ.
 
ಕೆಲಸ, ಸಾರ್ವಜನಿಕ ಸಮಸ್ಯೆಗಳ ಮದ್ಯದಲ್ಲೇ ದಿನಕಳೆಯುವ ಅಧಿಕಾರಿಗಳ ಮಾನಸಿಕ ಒತ್ತಡ ಕಡಿಮೆ ಮಾಡುವ ಸಲುವಾಗಿ ತರೀಕೆರೆ ತಾಲ್ಲೂಕು ಕಂದಾಯ‌ ಇಲಾಖೆ ವತಿಯಿಂದ ಆಯೋಜನೆ ಮಾಡಿದ್ದ ನೌಕರರ ಕ್ರೀಡಾಕೂಟ ಒಂದು ರೀತಿಯಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳಲ್ಲಿನ ಜಂಜಾಟ, ತೊಳಲಾಟಗಳನ್ನು ತೊಡೆದು ಹಾಕಿ ಹೊಸತನ ಮೂಡಿಸಿತ್ತು. ಅದರ ಜೊತೆಗೆ ಜಿಲ್ಲಾಧಿಕಾರಿಗಳು ಹಾಡಿದ ಹಾಡು ಅಧಿಕಾರಿಗಳ ಮನಸ್ಸನ್ನು ಟಪ್ಪಂಗೋಚಿ ಮಾಡಿದ್ದು, ಅಧಿಕಾರಿಗಳ ಪಾಲಿಗೆ ಇದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments