ಎಸಿಎಫ್ ಮನೆ ಮೇಲೆ ಎಸಿಬಿ ದಾಳಿ

Webdunia
ಶನಿವಾರ, 6 ಅಕ್ಟೋಬರ್ 2018 (15:26 IST)
ಭ್ರಷ್ಟರ ಬೇಟೆಗೆ ಮುಂದಾಗಿರುವ ಎಸಿಬಿ ಅಧಿಕಾರಿಗಳು ಎಸಿಎಫ್ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬೆಳಗಾವಿಯ ಖಾನಾಪುರ ಎಸಿಎಫ್ ಚಂದ್ರಗೌಡ ಪಾಟೀಲ್ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ.

ದಾಳಿ ವೇಳೆ ಬೆಂಗಳೂರಿನಲ್ಲಿ ಮಗನ ಹೆಸರಿನಲ್ಲಿದ್ದ ಆಸ್ತಿ ಪತ್ರ, ಯರಗಟ್ಟಿಯಲ್ಲಿ 13 ಗುಂಟೆ ಜಾಗದಲ್ಲಿ  ಸಿಮೆಂಟ್ ಬ್ಲಾಕ್ ತಯಾರಿಕಾ ಘಟಕದ ಆಸ್ತಿ ಪತ್ರ, ಬೆಳಗಾವಿಯ ಹಿಂಡಲಗಾ ಜೈಲು ಬಳಿಯ ಆಸ್ತಿ ಪತ್ರ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಪತ್ರ ಜಪ್ತಿಯಾಗಿದೆ.  ಎಸಿಎಫ್ ಮನೆಗೆ ಎಸಿಬಿ ಎಸ್ಪಿ ಅಮರನಾಥ ರೆಡ್ಡಿ ನೇತೃತ್ವದ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದೆ.

ಬೆಳಗಾವಿಯ ರಾಮತೀರ್ಥ ನಗರದ ಮನೆ ಭೇಟಿ ಪರಿಶೀಲನೆ ನಡೆಯುತ್ತಿದೆ. ದಾಳಿವೇಳೆ ಸಿಕ್ಕಿರುವ ಚಿನ್ನಾಭರಣ, ಹಣ ಮತ್ತು ದಾಖಲೆಗಳ ಬಗ್ಗೆ ವಿಚಾರಣೆ ಮಾಡಲಾಗಿದೆ. ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಮೇಲೆ ಎಸಿಬಿ ದಾಳಿ ನಡೆಸಿತ್ತು. ಎಸಿಬಿ ಅಧಿಕಾರಿಗಳ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಶಾಲೆ ಪುನರಾಂಭವಾಗಿ 18ದಿನಗಳಾದರೂ ದಕ್ಷಿಣ ಕನ್ನಡದ 20ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

Karnataka MLC Election, ಅಡ್ಡಮತದಾನದ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟ ಬಿ.ವೈ. ವಿಜಯೇಂದ್ರ

Karnataka MLC Election: ಕಾಂಗ್ರೆಸ್‌ಗೆ 5ಸ್ಥಾನ, ಬಿಜೆಪಿಗೆ 2, ಜೆಡಿಎಸ್‌ಗೆ ಸೋಲು

ಮುಂದಿನ ಸುದ್ದಿ
Show comments