Webdunia - Bharat's app for daily news and videos

Install App

ಮುಂದುವರೆದ ಬಿಬಿಎಂಪಿ ಕಚೇರಿಗಳ ಮೇಲಿನ ಎಸಿಬಿ ದಾಳಿ

Webdunia
ಶುಕ್ರವಾರ, 25 ಫೆಬ್ರವರಿ 2022 (20:28 IST)
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಯಲಿಗೆಳೆದು ಸಂಚಲನ ಮೂಡಿಸಿದ್ದ ಬೆನ್ನಲ್ಲೇ ಗುರುವಾರ ಬಿಬಿಎಂಪಿ ಕಚೇರಿಗಳ ಮೇಲೆ ಮುಗಿಬಿದ್ದಿದೆ. ಎಲ್ಲಾ ಆಯಾಮಗಗಳಲ್ಲಿ ವಿಭಾಗಗಳಲ್ಲಿ ಪರಿಶೀಲನೆ ಮುಂದುವರೆದಿದೆ.
 
ಇಂದು ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಕಚೇರಿ ಸೇರಿದಂತೆ ನಗರ ಯೋಜನೆ, ಕೇಂದ್ರ ಕಚೇರಿ, ಟಿಡಿಆರ್‌, ವಲಯ ಕಚೇರಿ, ಜಂಟಿ ಆಯುಕ್ತರ ಕಚೇರಿ, ರೆವಿನ್ಯೂ ಕಚೇರಿ ಸೇರಿದಂತೆ 27 ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.
 
ಡಿವೈಎಸ್‌ಪಿ, ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನೊಳಗೊಂಡ 200 ಅಧಿಕಾರಿ ಸಿಬ್ಬಂದಿಗಳ ವಿವಿಧ ತಂಡಗಳು ಎಂಟು ವಲಯಗಳ ಜಂಟಿ ಆಯುಕ್ತರ ಕಚೇರಿ, ಬಿಬಿಎಂಪಿಗೆ ಸೇರಿದ ರೆವಿನ್ಯೂ ಕಚೇರಿ, ನಗರ ಯೋಜನೆ ವಿಭಾಗ, ಜಾಹೀರಾತು, ಟಿಡಿಆರ್, ಆರೋಗ್ಯ ವಿಭಾಗ, ರಸ್ತೆ ಮತ್ತು ಮೂಲ ಸೌಕರ್ಯ (ರಾಜಕಾಲುವೆ) ವಿಭಾಗಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಶೋಧ ನಡೆದ್ದಾರೆ.
 
ಈ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿ ಕಾರಿಗಳು ಮತ್ತು ಸಿಬ್ಬಂದಿ ತಮಗೆ ವಹಿಸಿಕೊಟ್ಟಿರುವ ಮತ್ತು ನಿಯಂತ್ರಣದಲ್ಲಿರುವ ಸರ್ಕಾರಿ ಸ್ವತ್ತನ್ನು ದುರುಪಯೋಗಪಡಿಸಿಕೊಂಡು ಮಧ್ಯವರ್ತಿಗಳು ಮತ್ತು ಫಲಾನುಭವಿಗಳು ಹಾಗೂ ಖಾಸಗಿ ವ್ಯಕ್ತಿಗಳನ್ನು ಸೇರಿಕೊಂಡು ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಸರ್ಕಾರಕ್ಕೆ ನಷ್ಟ ಉಂಟುಮಾಡಿದ್ದಾರೆ. ಅಕ್ರಮ ಲಾಭ ಮಾಡಿಕೊಳ್ಳುವ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿರುವ ಕುರಿತು ಮೌಖಿಕ ಮತ್ತು ಲಿಖಿತ ದೂರುಗಳು ಬಂದ ಹಿನ್ನೆಲೆಯಲ್ಲಿ ಎಸಿಬಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ನಗರದ 11 ಸ್ಥಳಗಳಲ್ಲಿ 27 ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಸಂಜೆಯ ನಂತರವೂ ದಾಖಲೆಗಳ ಪರಿಶೀಲನೆ ಕಾರ್ಯ 
ಮುಂದುವರಿದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments