Webdunia - Bharat's app for daily news and videos

Install App

ಮುಂದುವರೆದ ಬಿಬಿಎಂಪಿ ಕಚೇರಿಗಳ ಮೇಲಿನ ಎಸಿಬಿ ದಾಳಿ

Webdunia
ಶುಕ್ರವಾರ, 25 ಫೆಬ್ರವರಿ 2022 (20:28 IST)
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಯಲಿಗೆಳೆದು ಸಂಚಲನ ಮೂಡಿಸಿದ್ದ ಬೆನ್ನಲ್ಲೇ ಗುರುವಾರ ಬಿಬಿಎಂಪಿ ಕಚೇರಿಗಳ ಮೇಲೆ ಮುಗಿಬಿದ್ದಿದೆ. ಎಲ್ಲಾ ಆಯಾಮಗಗಳಲ್ಲಿ ವಿಭಾಗಗಳಲ್ಲಿ ಪರಿಶೀಲನೆ ಮುಂದುವರೆದಿದೆ.
 
ಇಂದು ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಕಚೇರಿ ಸೇರಿದಂತೆ ನಗರ ಯೋಜನೆ, ಕೇಂದ್ರ ಕಚೇರಿ, ಟಿಡಿಆರ್‌, ವಲಯ ಕಚೇರಿ, ಜಂಟಿ ಆಯುಕ್ತರ ಕಚೇರಿ, ರೆವಿನ್ಯೂ ಕಚೇರಿ ಸೇರಿದಂತೆ 27 ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.
 
ಡಿವೈಎಸ್‌ಪಿ, ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನೊಳಗೊಂಡ 200 ಅಧಿಕಾರಿ ಸಿಬ್ಬಂದಿಗಳ ವಿವಿಧ ತಂಡಗಳು ಎಂಟು ವಲಯಗಳ ಜಂಟಿ ಆಯುಕ್ತರ ಕಚೇರಿ, ಬಿಬಿಎಂಪಿಗೆ ಸೇರಿದ ರೆವಿನ್ಯೂ ಕಚೇರಿ, ನಗರ ಯೋಜನೆ ವಿಭಾಗ, ಜಾಹೀರಾತು, ಟಿಡಿಆರ್, ಆರೋಗ್ಯ ವಿಭಾಗ, ರಸ್ತೆ ಮತ್ತು ಮೂಲ ಸೌಕರ್ಯ (ರಾಜಕಾಲುವೆ) ವಿಭಾಗಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಶೋಧ ನಡೆದ್ದಾರೆ.
 
ಈ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿ ಕಾರಿಗಳು ಮತ್ತು ಸಿಬ್ಬಂದಿ ತಮಗೆ ವಹಿಸಿಕೊಟ್ಟಿರುವ ಮತ್ತು ನಿಯಂತ್ರಣದಲ್ಲಿರುವ ಸರ್ಕಾರಿ ಸ್ವತ್ತನ್ನು ದುರುಪಯೋಗಪಡಿಸಿಕೊಂಡು ಮಧ್ಯವರ್ತಿಗಳು ಮತ್ತು ಫಲಾನುಭವಿಗಳು ಹಾಗೂ ಖಾಸಗಿ ವ್ಯಕ್ತಿಗಳನ್ನು ಸೇರಿಕೊಂಡು ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಸರ್ಕಾರಕ್ಕೆ ನಷ್ಟ ಉಂಟುಮಾಡಿದ್ದಾರೆ. ಅಕ್ರಮ ಲಾಭ ಮಾಡಿಕೊಳ್ಳುವ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿರುವ ಕುರಿತು ಮೌಖಿಕ ಮತ್ತು ಲಿಖಿತ ದೂರುಗಳು ಬಂದ ಹಿನ್ನೆಲೆಯಲ್ಲಿ ಎಸಿಬಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ನಗರದ 11 ಸ್ಥಳಗಳಲ್ಲಿ 27 ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಸಂಜೆಯ ನಂತರವೂ ದಾಖಲೆಗಳ ಪರಿಶೀಲನೆ ಕಾರ್ಯ 
ಮುಂದುವರಿದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments