Webdunia - Bharat's app for daily news and videos

Install App

ಭ್ರಷ್ಟ ಅಧಿಕಾರಿ ಮೇಲೆ ಎಸಿಬಿ ದಾಳಿ

Webdunia
ಮಂಗಳವಾರ, 8 ಸೆಪ್ಟಂಬರ್ 2020 (23:14 IST)
ಭ್ರಷ್ಟಾಚಾರದಲ್ಲಿ ತೊಡಗಿದ್ದ ಅಧಿಕಾರಿ ಮೇಲೆ ಎಸಿಬಿ ದಾಳಿ ನಡೆದಿದೆ.

ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ಎಸಿಬಿ‌ ಬಲೆಗೆ ಬಿದ್ದಿದ್ದಾನೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ಸುರೇಶ್ ಬಾರಕೇರ್ ಮೇಲೆ ಎಸಿಬಿ ದಾಳಿ ನಡೆದಿದೆ.

ತೋಟಗಾರಿಕೆ ಕಚೇರಿಯಲ್ಲಿ ರೈತರಿಗೆ ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚದ ಬೇಡಿಕೆ ಇಟ್ಟಿದ್ದರು.

ಪ್ರತಿ ಹೆಕ್ಟೇರ್ ಪಪ್ಪಾಯಿ ಗೆ 1.75 ಲಕ್ಷ ರೂ‌.ಸಹಾಯಧನವಿದೆ. 2 ಹೆಕ್ಟೇರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಬಾರಕೇರ 14 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಎ ಸಿ ಬಿ ದಾಳಿಗೆ ಬಿದ್ದಿದ್ದಾರೆ. ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments