Publish Date: Wed, 20 Feb 2019 (11:28 IST)
Updated Date: Wed, 20 Feb 2019 (11:30 IST)
ಎಸಿಬಿ ಅಧಿಕಾರಿಗಳು ಆರ್ ಟಿ ಓ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಚಾಮರಾಜನಗರ ಆರ್ ಟಿ ಓ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ಹೆಚ್ಚುವರಿ ಹಣ ಸಂಗ್ರಹ ಹಿನ್ನೆಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳ ತಂಡ ತನಿಖೆ ನಡೆಸಿದೆ. ಡಿಎಸ್ಪಿ ಮೋಹನ್ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ಕಡತಗಳ ಪರಿಶೀಲನೆಯಲ್ಲಿ ಎಸಿಬಿ ಅಧಿಕಾರಿಗಳ ತಂಡ ನಿರತವಾಗಿತ್ತು.
ಇಪ್ಪತ್ತಕ್ಕೂ ಹೆಚ್ಚು ಸಾರ್ವಜನಿಕರನ್ನು ಹೊರ ಬಿಡದೆ ವಿಚಾರಣೆಗೆ ಒಳಪಡಿಸಿದ್ದಾರೆ ಎಸಿಬಿ ಅಧಿಕಾರಿಗಳು.
ಸಾರ್ವಜನಿಕರಿಂದ ಆರ್ ಟಿ ಓ ಅಧಿಕಾರಿಗಳಿಗೆ ಹಣ ನೀಡಿರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವ ಎಸಿಬಿ ಅಧಿಕಾರಿಗಳು, ಸಾರ್ವಜನಿಕರ ದೂರಿನ ಮೇರೆಗೆ ದಾಳಿ ನಡೆಸಿದ್ದಾರೆ.