Webdunia - Bharat's app for daily news and videos

Install App

ಎಸಿಬಿಯಿಂದ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಮನ್ಸ್

Webdunia
ಸೋಮವಾರ, 21 ಆಗಸ್ಟ್ 2017 (13:53 IST)
ಶಿವರಾಮ ಕಾರಂತ ಲೇಔಟ್ ಅಕ್ರಮ ಡಿನೋಟಿಫಿಕೆಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಮತ್ತೆ ಮಾಜಿ ಸಿಎಂ ಯಡಿಯೂರಪ್ಪಗೆ ಸಮನ್ಸ್ ಜಾರಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಳೆದ ವಾರ ಖುದ್ದು ವಿಚಾರಣೆಗೆ ಹಾಜರಾಗುವಂತೆ ಎಸಿಬಿ ಸಮನ್ಸ್ ನೀಡಿದ್ದಾಗ ಯಡಿಯೂರಪ್ಪ 10 ದಿನಗಳ ಸಮಯಾವಕಾಶ ಕೋರಿ ಮನವಿ ಸಲ್ಲಿಸಿದ್ದರು. ಆದರೆ, ಯಡಿಯೂರಪ್ಪ ಮನವಿ ತಿರಸ್ಕರಿಸಿರುವ ಎಸಿಬಿ 3 ದಿನಗಳಲ್ಲಿ ಹಾಜರಾಗುವಂತೆ ಸಮನ್ಸ್ ನೀಡಿದೆ ಎನ್ನಲಾಗುತ್ತಿದೆ.

ಇತ್ತ,, ಎಸಿಬಿ ತನಿಖೆಗೆ ತಡೆ ಕೋರಿ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜಕೀಯ ಉದ್ದೇಶದಿಂದ ಕೇಸು ದಾಖಲಿಸಲಾಗಿದ್ದು, ರದ್ದು ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಈ ಮಧ್ಯೆ, ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುವಂತೆ ಎಸಿಬಿ ಅಧಿಕಾರಿಗಳು ಒತ್ತಡ ಹೇರಿದ್ದರು ಎಂದು ಎಸಿಬಿ ಅಧಿಕಾರಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments