Webdunia - Bharat's app for daily news and videos

Install App

ಬಿಎಸ್`ವೈಗೆ ಮತ್ತೊಂದು ಸಂಕಷ್ಟ..? ವಿಧಾನಸೌಧದ ಬಳಿ ಕಾರಿನಲ್ಲಿ ಸಿಕ್ಕ ಹಣದ ಬಗ್ಗೆ ಎಸಿಬಿ ತನಿಖೆ

Webdunia
ಶನಿವಾರ, 16 ಸೆಪ್ಟಂಬರ್ 2017 (10:56 IST)
ವಿಧಾನಸೌಧದಲ್ಲಿ ಕಾರಿನಲ್ಲಿ ಕೋಟಿ ಕೋಟಿ ಹಣ ಸಿಕ್ಕ ಪ್ರಕರಣ ಇದೀಗ ಮರುಜೀವ ಪಡೆದುಕೊಂಡಿದೆ. ಸಿಬಿಐ ಕೋರ್ಟ್`ನ ನಿವೃತ್ತ ಜಡ್ಕ್ ಮತ್ತು ವಕೀಲರ ವಿಚಾರಣೆಗೆ ಎಸಿಬಿ ತಯಾರಿ ನಡೆಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಮುಖ್ಯ ಕಾರ್ಯದರ್ಶಿ ಆದೇಶದ ಹಿನ್ನೆಲೆಯಲ್ಲಿ ಈ ತನಿಖೆಗೆ ಎಸಿಬಿ ಮುಂದಾಗಿದೆ.

ವಿಧಾನಸೌಧದಲ್ಲಿ ಪತ್ತೆಯಾಗಿದ್ದ ಈ ಹಣ ಬಿಎಸ್`ವೈಗೆ ಸೇರಿದ್ದು, ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕಲು ಕಿಕ್ ಬ್ಯಾಕ್ ಕೊಡಲು ಈ ಹಣ ತರಲಾಗಿತ್ತು ಎಂದು ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾರೆಡ್ಡಿ ಆರೋಪಿಸಿದ್ದರು. ಬಳಿಕ ಎಸಿಬಿಗೂ ದೂರು ನೀಡಿದ್ದರು. ಆರೋಪದ ಹಿನ್ನೆಲೆಯಲ್ಲಿ ಇದೀಗ ಮುಖ್ಯ ಕಾರ್ಯದರ್ಶಿ ಆದೇಶದ ಮೇಲೆ ತನಿಖೆಗೆ ಎಸಿಬಿ ನಿರ್ಧರಿಸಿದೆ. ಕಳದ ವರ್ಷದ ಅಕ್ಟೋಬರ್`ನಲ್ಲಿ ವಿಧಾನಸೌಧದ ಬಳಿ ಕಾರಿನಲ್ಲಿ 1.97 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಕಾರಿನಲ್ಲಿದ್ದ ಸಿದ್ಧಾರ್ಥ್ ನಾನು ಬಿಎಸ್`ವೈ ಮತ್ತು ಅವರ ಮಗನ ವಕೀಲರೆಂದು ಹೇಳಿದ್ದರು. ಅಂದು ಹಣ ವಶಕ್ಕೆ ಪಡೆದಿದ್ದ ಪೊಲೀಸರು ಐಟಿ ಅಧಿಕಾರಿಗಳ ವಶಕ್ಕೆ ಒಪ್ಪಿಸಿ ತನಿಖೆಗೆ ಮನವಿ ಮಾಡಿದ್ದರು.

ಇದೀಗ, ಎಸಿಬಿ ತಮಿಖೆಗೆ ಮುಂದಾಗಿದ್ದು, ಯಡಿಯೂರಪ್ಪನವರನ್ನ ಖುಲಾಸೆಗೊಳಿಸಿದ ನಿವೃತ್ತ ನ್ಯಾಯಾಧೀಶರು, ವಕೀಲರು ಮತ್ತು ಯಡಿಯೂರಪ್ಪನವರನ್ನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments