Webdunia - Bharat's app for daily news and videos

Install App

15 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ನಡೆದ ಎಸಿಬಿ ದಾಳಿ ಸಂಬಂಧ ಅಕ್ರಮ ಆಸ್ತಿ ಬಗೆದಷ್ಟು ಬಯಲು

Webdunia
ಭಾನುವಾರ, 28 ನವೆಂಬರ್ 2021 (20:08 IST)
ಬೆಂಗಳೂರು: ಕಳೆದ ನಾಲ್ಕು ದಿನಗಳ ಹಿಂದೆ ನಡೆದ 15 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ನಡೆದ ಎಸಿಬಿ ದಾಳಿ ಸಂಬಂಧ ಅಕ್ರಮ ಆಸ್ತಿ ಬಗೆದಷ್ಟು ಬಯಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ವಾಸುದೇವ ಒಟ್ಟು ಆಸ್ತಿ 29.15 ಕೋಟಿ ರೂ. ಇದ್ದು, ಅಕ್ರಮ ಆಸ್ತಿ ಪ್ರಮಾಣ ಶೇ. 1408 ರಷ್ಟು ಹೆಚ್ಚಿದೆ ಎಂದು ಎಸಿಬಿ ಬಹಿರಂಗಪಡಿಸಿದೆ.
ವಾಸುದೇವ ಎಂಬುವವರ ಸ್ಥಿರಾಸ್ತಿ 26.78 ಕೋಟಿ ರೂ., ಚರಾಸ್ತಿ 3.87 ಕೋಟಿ ರೂ. ಸಿಕ್ಕಿದೆ. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ 19 ನಿವೇಶನ, 3 ಮನೆಗಳನ್ನು ಹೊಂದಿರುವುದು ಎಸಿಬಿ ದಾಳಿಯಿಂದ ಬಯಲಾಗಿದೆ.
ರುದ್ರೇಶಪ್ಪನವರಿಗೆ ಡಿ. 7ರ ತನಕ ನ್ಯಾಯಾಂಗ ಬಂಧನ:
ಎಸಿಬಿ ದಾಳಿಗೆ ಒಳಗಾಗಿದ್ದ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪನವರಿಗೆ ಡಿ. 7ರ ತನಕ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ದಾಳಿಯ ವೇಳೆ ರುದ್ರೇಶಪ್ಪನವರ ಚಾಲುಕ್ಯ ನಗರದ ಮನೆಯಲ್ಲಿ 9.5 ಕೆ.ಜಿ ಬಂಗಾರ, 3 ಕೆ.ಜಿ ಬೆಳ್ಳಿ, 15 ಲಕ್ಷ ರೂ ಹಣ, 4 ಸೈಟು, 2 ಕಾರು, ಎರಡು ಮನೆಗಳು ಇರುವುದು ಪತ್ತೆಯಾಗಿತ್ತು‌.
ಜೈಲು ವಾರ್ಡ್​ ನಲ್ಲಿ ಚಿಕಿತ್ಸೆ:
ಜೇವರ್ಗಿ ಪಿಡಬ್ಲ್ಯೂಡಿ ಕಿರಿಯ ಇಂಜಿನಿಯರ್ ಶಾಂತಗೌಡ ಬಿರಾದಾರನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದ ಬೆನ್ನಲ್ಲೇ, ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಜಿಮ್ಸ್ ಆಸ್ಪತ್ರೆಯ ಜೈಲು ವಾರ್ಡ್​ಗೆ ರವಾನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments