15 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ನಡೆದ ಎಸಿಬಿ ದಾಳಿ ಸಂಬಂಧ ಅಕ್ರಮ ಆಸ್ತಿ ಬಗೆದಷ್ಟು ಬಯಲು

Webdunia
ಭಾನುವಾರ, 28 ನವೆಂಬರ್ 2021 (20:08 IST)
ಬೆಂಗಳೂರು: ಕಳೆದ ನಾಲ್ಕು ದಿನಗಳ ಹಿಂದೆ ನಡೆದ 15 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ನಡೆದ ಎಸಿಬಿ ದಾಳಿ ಸಂಬಂಧ ಅಕ್ರಮ ಆಸ್ತಿ ಬಗೆದಷ್ಟು ಬಯಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ವಾಸುದೇವ ಒಟ್ಟು ಆಸ್ತಿ 29.15 ಕೋಟಿ ರೂ. ಇದ್ದು, ಅಕ್ರಮ ಆಸ್ತಿ ಪ್ರಮಾಣ ಶೇ. 1408 ರಷ್ಟು ಹೆಚ್ಚಿದೆ ಎಂದು ಎಸಿಬಿ ಬಹಿರಂಗಪಡಿಸಿದೆ.
ವಾಸುದೇವ ಎಂಬುವವರ ಸ್ಥಿರಾಸ್ತಿ 26.78 ಕೋಟಿ ರೂ., ಚರಾಸ್ತಿ 3.87 ಕೋಟಿ ರೂ. ಸಿಕ್ಕಿದೆ. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ 19 ನಿವೇಶನ, 3 ಮನೆಗಳನ್ನು ಹೊಂದಿರುವುದು ಎಸಿಬಿ ದಾಳಿಯಿಂದ ಬಯಲಾಗಿದೆ.
ರುದ್ರೇಶಪ್ಪನವರಿಗೆ ಡಿ. 7ರ ತನಕ ನ್ಯಾಯಾಂಗ ಬಂಧನ:
ಎಸಿಬಿ ದಾಳಿಗೆ ಒಳಗಾಗಿದ್ದ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪನವರಿಗೆ ಡಿ. 7ರ ತನಕ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ದಾಳಿಯ ವೇಳೆ ರುದ್ರೇಶಪ್ಪನವರ ಚಾಲುಕ್ಯ ನಗರದ ಮನೆಯಲ್ಲಿ 9.5 ಕೆ.ಜಿ ಬಂಗಾರ, 3 ಕೆ.ಜಿ ಬೆಳ್ಳಿ, 15 ಲಕ್ಷ ರೂ ಹಣ, 4 ಸೈಟು, 2 ಕಾರು, ಎರಡು ಮನೆಗಳು ಇರುವುದು ಪತ್ತೆಯಾಗಿತ್ತು‌.
ಜೈಲು ವಾರ್ಡ್​ ನಲ್ಲಿ ಚಿಕಿತ್ಸೆ:
ಜೇವರ್ಗಿ ಪಿಡಬ್ಲ್ಯೂಡಿ ಕಿರಿಯ ಇಂಜಿನಿಯರ್ ಶಾಂತಗೌಡ ಬಿರಾದಾರನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದ ಬೆನ್ನಲ್ಲೇ, ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಜಿಮ್ಸ್ ಆಸ್ಪತ್ರೆಯ ಜೈಲು ವಾರ್ಡ್​ಗೆ ರವಾನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments