ಬಿ. ಡಿ. ಎ. ಬ್ರೋಕರ್ ಗಳಿಗೆ ಎ. ಸಿ. ಬಿ. ಶಾಕ್

Webdunia
ಮಂಗಳವಾರ, 22 ಮಾರ್ಚ್ 2022 (14:48 IST)
ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ಲಂಚದ ಆಮಿಷವೊಡ್ಡಿ ಮತ್ತು ಪ್ರಭಾವ ಬೀರಿ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪದ ಮೇಲೆ 9 ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ.
ಬಿಡಿಎ ಭ್ರಷ್ಟಾಚಾರದ ಮೂಲವೇ ಈ ಮಧ್ಯವರ್ತಿಗಳು. ಬಿಡಿಎಗೆ ಬರುವ ಪ್ರತಿಯೊಬ್ಬ ಅಧಿಕಾರಿಯನ್ನು ಮಧ್ಯವರ್ತಿಗಳು ಸಂಪರ್ಕಿಸುತ್ತಿದ್ದರು. ನಿವೇಶನ ಹಂಚಿಕೆ, ಸರ್ಕಾರಿ ನಿವೇಶನ ಅಭಿವೃದ್ದಿ ಸೇರಿ ಬಿಡಿಎನ‌ ಪ್ರತಿಯೊಂದು ಪ್ರಕ್ರಿಯೆಯಲ್ಲೂ ಮಧ್ಯವರ್ತಿಗಳ ಒಡನಾಟ ಪತ್ತೆಯಾಗಿದ್ದು, ಇದೆ ಹಿನ್ನೆಲೆಯಲ್ಲಿ ಬಿಡಿಎ ಮಧ್ಯವರ್ತಿಗಳ ಮೇಲೆ ಎಸಿಬಿ ದಾಳಿ ಮಾಡಿದೆ.
 
ದೊಮ್ಮಲೂರಿನ ಬ್ರೋಕರ್ ಮನೋಜ್ ಮನೆಯಲ್ಲಿ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿವೆ. ಐಷಾರಮಿ ಸನ್ ಗ್ಲಾಸಸ್ ಹಾಗೂ ವಾಚ್​ಗಳು ಪತ್ತೆಯಾಗಿವೆ. ದೇಶ ಹಾಗೂ ವಿದೇಶಗಳ ಪ್ರತಿಷ್ಟಿತ ಬ್ರಾಂಡ್​ನ ಸನ್ ಗ್ಲಾಸಸ್ ಹಾಗೂ ಕೈ ಗಡಿಯಾರಗಳು ಪತ್ತೆಯಾಗಿವೆ. ಚಿನ್ನಾಭರಣಗಳು ಸಹ ಎಸಿಬಿ ಅಧಿಕಾರಿಗಳ ಕಣ್ಣಿಗೆ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬಕಾರಿ ನೀತಿ ಹಗರಣದಲ್ಲಿ ಮಹತ್ವದ ಆದೇಶ: ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್‌, Video

ಇನ್ನೇನು ಪರೀಕ್ಷೆ ಮುಗೀತಾ ಬಂತು, ಮಕ್ಕಳು ರಜೆಯಲ್ಲಿ ಬೆಂಗಳೂರಿನಲ್ಲಿ ಭೇಟಿ ಕೊಡಬೇಕಾದ ಸ್ಥಳಗಳು ಇಲ್ಲಿದೆ

ಅಂತರ ಕಾಯ್ದುಕೊಂಡ ಪ್ರೇಮಿಗೆ ಚಾಕುವಿನಿಂದ ಇರಿದ ಯುವತಿ, ಬಳಿಕ ಮಾಡಿದ್ದೇನು ಗೊತ್ತಾ

ಮದ್ಯ ಹಗರಣದಲ್ಲಿ ಕಳಂಕ ಮುಕ್ತರಾದ ಅರವಿಂದ್ ಕೇಜ್ರಿವಾಲ್ ಕಣ್ಣೀರು Video

ಮುಂದಿನ ಸುದ್ದಿ
Show comments