Select Your Language

Notifications

webdunia
webdunia
webdunia
webdunia

ಗೃಹ ಸಚಿವರ ಕ್ಷೇತ್ರದಲ್ಲಿ ಎಸಿಬಿ ಬಲೆಗೆ ಬಿದ್ದ ಲಂಚಬಾಕ ಅಧಿಕಾರಿ

ಗೃಹ ಸಚಿವರ ಕ್ಷೇತ್ರದಲ್ಲಿ ಎಸಿಬಿ ಬಲೆಗೆ ಬಿದ್ದ ಲಂಚಬಾಕ ಅಧಿಕಾರಿ
ಹಾವೇರಿ , ಶುಕ್ರವಾರ, 13 ಡಿಸೆಂಬರ್ 2019 (16:01 IST)
ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಸ್ವಕ್ಷೇತ್ರದಲ್ಲಿಯೇ ಲಂಚಬಾಕ ಅಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಐವತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯ್ತಿ ಪಿಡಿಓ ಎಸಿಬಿ ಬಲೆಗೆ ಬಿದ್ದಿದ್ದಾರೆ.   

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ  ಈ ಘಟನೆ ನಡೆದಿದ್ದು,  
ಶಿವಾನಂದ ಹಡಪದ ಎಸಿಬಿ ಬಲೆಗೆ ಬಿದ್ದವರು.
webdunia

ಗುತ್ತಿಗೆದಾರ ಮಹೇಶ ಸಾಲಮನಿ ಎಂಬುವರಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಸಿಕ್ಕಿದ್ದಾರೆ. ಶಿವಾನಂದ ಹಡಪದ ಅವರ ಮೇಲೆ ಕಳೆದ ಎರಡು ವರ್ಷಗಳಿಂದ ಹಲವಾರು ಆರೋಪಗಳು ಕೇಳಿಬಂದಿದ್ದವು.

ಆದರೂ ಈ ಲಂಚಬಾಕ ಅಧಿಕಾರಿ ರಾಜಕೀಯವಾಗಿ ನಂಟು ಬಳಸಿಕೊಂಡು, ಅಧಿಕಾರವನ್ನು ದುರಪಯೋಗ ಮಾಡುತ್ತಿದ್ದನು.
ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮೊಬೈಲ್ ಸಿಮ್ ಗಾಗಿ ತಾಯಿಗೆ ಚಾಕು ಇರಿದ ಪಾಪಿ ಮಕ್ಕಳು