ದೇಶಾದ್ಯಂತ ತೀವ್ರಗೊಂಡ ಅಗ್ನಿಪಥ್ ವಿರೋಧಿ ಪ್ರತಿಭಟನೆ: ಪೊಲೀಸ್ ಠಾಣೆಗೆ ಬೆಂಕಿ!

Webdunia
ಶುಕ್ರವಾರ, 17 ಜೂನ್ 2022 (18:34 IST)
ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ಉತ್ತರ ಪ್ರದೇಶದಲ್ಲಿ ಪೊಲೀಸ್ ಠಾಣೆಗೆ ದುಷ್ಕರ್ಮಿಗಳು ಬೆಂಕಿ ಹಾಕಿದ್ದಾರೆ.
ಉತ್ತರ ಪ್ರದೇಶದ ಆಲಿಘರ್ನ ಜತ್ತಾರಿ ಪೊಲೀಸ್ ಠಾಣೆಗೆ ಹಾಗು ಅಲ್ಲಿದ್ದ ಸರ್ಕಾರಿ ವಾಹನಗಳಿಗೆ ಬೆಂಕಿ ಆಕ್ರೋಶ ಹೊರ ಹಾಕಿದ್ದಾರೆ. ಉತ್ತರಪ್ರದೇಶದ ಆರು ಜಿಲ್ಲೆಗಳಲ್ಲಿ ಪ್ರತಿಭಟನೆಯ ಕಿಚ್ಚು ಜೋರಾಗಿದ್ದು ಕೆಲವೆಡೆ ರಸ್ತೆ ತಡೆ ಭದ್ರತಾ ಪಡೆಗಳ ಮೇಲೆ ಕಲ್ಲುತೂರಾಟ ನಡೆದಿದೆ ಎಂದು ವರದಿಯಾಗಿದೆ. 
ಉತ್ತರಪ್ರದೇಶದ ಆಗ್ರಾ, ಆಲಿಘರ್, ಬುಲಂದರ್ಶಹರ್, ಮಥುರಾ, ಫಿರೋಜಾಬಾದ್ ಹಾಗೂ ಬಲಿಯಾ ಜಿಲ್ಲೆಗಳಲ್ಲಿ ಪ್ರತಿಭಟನೆ ಕಾವು ಜೋರಾಗಿದೆ. ಕೆಲವೆಡೆ ಬಸ್ ಗಳ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. 
ಉತ್ತರಪ್ರದೇಶದಾದ್ಯಂತ ಸಂಚರಿಸುವ 21 ರೈಲುಗಳ ಸಂಚಾರವನ್ನ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಇಲ್ಲಿಯವರೆಗು ಒಟ್ಟು ನಾಲ್ಕು ರೈಲುಗಳಿಗೆ ಬೆಂಕಿ ಹಚ್ಚಲಾಗಿದ್ದು ಬಿಹಾರದಲ್ಲಿ 2, ಉತ್ತರ ಪ್ರದೇಶ ಹಾಗೂ ತೆಲಂಗಾಣದಲ್ಲಿ ತಲಾ ಒಂದು ರೈಲಿಗೆ ಪ್ರತಿಭಟನಕಾರರು ಬೆಂಕಿ ಹಚ್ಚಿದ್ದಾರೆ. 
ಇದೇ ವೇಳೆ ಹರಿಯಾಣದಲ್ಲಿ ಪ್ರತಿಭಟನೆಯ ಕಿಚ್ಚು ಜೋರಾಗಿದ್ದು ರಾಜ್ಯದ್ಯಂತ  ಮುಂದಿನ ಆದೇಶದವರೆಗೂ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments