ಪತ್ರಕರ್ತೆಯರ ಅಹವಾಲು ಸ್ವೀಕರಿಸಿ ಧೈರ್ಯ ತುಂಬಿದ ಡಿಸಿಎಂ

Webdunia
ಗುರುವಾರ, 14 ಮೇ 2020 (20:57 IST)
ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕೊಳಗಾಗಿರುವ ಪತ್ರಕರ್ತೆಯರ ಅಹವಾಲುಗಳನ್ನು ಡಿಸಿಎಂ ಆಲಿಸಿದ್ದಾರೆ.

ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅಹವಾಲು ಸ್ವೀಕರಿಸಿ, ಮಾನಸಿಕ ಸ್ಥೈರ್ಯ ತುಂಬಿದರು. ಲಾಕ್ ಡೌನ್ ಹಿನ್ನೆಲೆಯಿಂದ ಪತ್ರಕರ್ತೆಯರು ಬಾಧಿತರಾಗಿದ್ದು, ಅವರಿಗೆ ಸರ್ಕಾರ  ನೆರವಾಗಬೇಕು.  ಅನಿವಾರ್ಯವಾಗಿ ಇತರೆ ವೃತ್ತಿಪರರಂತೆ ಪತ್ರಕರ್ತೆಯರು ಮನೆಯಿಂದಲೇ ಕಾರ್ಯನಿರ್ವಹಿಸುವ ಪರಿಸ್ಥಿತಿ ಎದುರಾಗಿದೆ. ಇದಕ್ಕೆ ಪೂರಕ ಪರಿಕರಗಳನ್ನು ಒದಗಿಸಬೇಕು.  ಸಾಮಾಜಿಕ ಪಿಡುಗುಗಳ ನಿವಾರಣೆಗಾಗಿ ಕಾರ್ಯಾಗಾರ, ಶಿಬಿರ, ಕ್ಷೇತ್ರ ಪ್ರಾತ್ಯಾಕ್ಷಿಕೆಗಳನ್ನು ಕರ್ನಾಟಕ ಪತ್ರಕರ್ತೆಯರ ಸಂಘವು  ಆಯೋಜಿಸಲು ಸಮಾಜ ಕಲ್ಯಾಣ ಇಲಾಖೆಯು ಸಹಭಾಗಿತ್ವ ನೀಡಬೇಕು.

ವೃತ್ತಿ ಪರ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ, ಕೋರ್ಸುಗಳನ್ವಯ ವೃತ್ತಿಪರ ಕೋರ್ಸುಗಳನ್ನು  ಕರ್ನಾಟಕ ಪತ್ರಕರ್ತೆಯರ ಸಂಘದ ಸಹಭಾಗಿತ್ವದಲ್ಲಿ ಆಯೋಜಿಸಬೇಕು. ಅಗತ್ಯ ಬೆಂಬಲ ನೀಡಿದರೆ ಪತ್ರಕರ್ತೆಯರು ಮುಂಬರುವ ದಿನಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ  ಕಾರ್ಯಶೀಲರಾಗಿ ಕಾರ್ಯನಿರ್ವಹಿಸಲು ನೆರವಾಗುತ್ತದೆ ಎಂದು ಸಂಘದ ಪದಾಧಿಕಾರಿಗಳು ನೀಡಿದ ಮನವಿಗೆ ಡಿಸಿಎಂ ಪೂರಕವಾಗಿ ಸ್ವಂದಿಸಿದರು.

ಪತ್ರಕರ್ತೆಯರು ವೃತ್ತಿಪರತೆಯಿಂದ ಕಾರ್ಯನಿರ್ವಹಿಸಲು ಅನುಕೂಲವಾಗುವಂತಹ ಕಾರ್ಯಾಗಾರಗಳನ್ನು ಆಯೋಜಿಸಲು ನೆರವು ನೀಡಲಾಗುತ್ತದೆ. ಸಂಘದ ಕಾರ್ಯಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುವುದು ಎಂದು ಅವರು ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಕಾಂಗ್ರೆಸ್ ಪಾತಾಳಕ್ಕೆ ಕುಸಿಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಬೇಡ, ಪ್ರಿಯಾಂಕ್ ಗಾಂಧಿ ಬಂದ್ರೆ ಸರಿ ಹೋಗುತ್ತೆ

ಮುಂದಿನ ಸುದ್ದಿ
Show comments