Select Your Language

Notifications

webdunia
webdunia
webdunia
webdunia

ಕಾರು-ಬೈಕ್ ನಡುವೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಕಾರು-ಬೈಕ್ ನಡುವೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು
ಉಡುಪಿ , ಗುರುವಾರ, 1 ಅಕ್ಟೋಬರ್ 2015 (14:30 IST)
ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ಣು ಗ್ರಾಮದ ಬಳಿ ನಡೆದಿದೆ. 
 
ಘಟನೆಯಲ್ಲಿ ಮೃತಪಟ್ಟವರನ್ನು ಬೈಕ್ ಸವಾರ ಪ್ರಕಾಶ್, ಅವರ ಪತ್ನಿ ಸುಮಿತ್ರಾ ಹಾಗೂ ಪುತ್ರಿ ಸೃಷ್ಠಿ ಎಂದು ಹೇಳಲಾಗಿದ್ದು, ಕೂಲಿ ಕೆಲಸಕ್ಕಾಗಿ ಜಿಲ್ಲೆಗೆ ವಲಸೆ ಬಂದಿದ್ದರು ಎಂದು ತಿಳಿದು ಬಂದಿದೆ. ಮೃತರು ಗದಗ ಜಿಲ್ಲೆಯ ಮೂಲದವರಾಗಿದ್ದಾರೆ. 
 
ಘಟನೆ ಹಿನ್ನೆಲೆ: ಅಪಘಾತಕ್ಕೆ ಕಾರಣವಾದ ಕಾರು ಕಾರ್ಕಳದಿಂದ ಪಡುಬಿದ್ರಿ ನಗರದ ಕಡೆಗೆ ಚಲಿಸುತ್ತಿತ್ತು ಎನ್ನಲಾಗಿದ್ದು, ಈ ವೇಳೆ ಚಲಿಸುತ್ತಿದ್ದ ಬೈಕ್‌ಗೆ ವೇಗವಾಗಿ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡು ಬೈಕ್ ಸವಾರನ ಕುಟುಂಬವನ್ನು ಸ್ಥಳೀಯರೇ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಆದರೆ ಮೂವರೂ ಕೂಡ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಬಲಿಕ ಕಾರು ಚಾಲಕ ಕಾರನನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.  
 
ಈ ಸಂಬಂಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share this Story:

Follow Webdunia kannada