Webdunia - Bharat's app for daily news and videos

Install App

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ನಾಲ್ವರು ಸಾವು

Webdunia
ಶುಕ್ರವಾರ, 6 ಮಾರ್ಚ್ 2015 (13:49 IST)
ದ್ವಿಚಕ್ರವಾಹನ ಹಾಗೂ ಗೂಡ್ಸ್ ಲಾರಿಯೊಂದರ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದ್ವಿ ಚಕ್ರ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಡಿಗ್ಗಿ ಎಂಬ ಗ್ರಾಮದ ಬಳಿ ನಡೆದಿದೆ. 
 
ಮೃತರೆಲ್ಲರೂ ಕೂಡ ಮಹಾರಾಷ್ಟ್ರ ಮೂಲದವರು ಎನ್ನಲಾಗಿದ್ದು, ಸಂಪೂರ್ಣ ವಿವರ ತಿಳಿದು ಬಂದಿಲ್ಲ. ಇನ್ನು ಸರಕನ್ನು ಹೊತ್ತೊಯ್ಯುತ್ತಿದ್ದ ಲಾರಿಯು ಬೀದರ್‌ನಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಘಟನೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲವಾದರೂ ಲಾರಿ ವೇಗವಾಗಿ ಚಲಿಸುತ್ತಿದ್ದುದೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಅಲ್ಲದೆ ಬೈಕ್ ಸವಾರರೂ ಕೂಡ ನಾಲ್ಕು ಮಂದಿ ಜೊತೆಯಲ್ಲಿಯೇ ಪ್ರಯಾಣಿಸುತ್ತಿದ್ದುದರಿಂದ ಆಯತಪ್ಪಿ ಅಪಘಾತ ಸಂಭವಿಸಿರಬಹುದು ಎಂದೂ ಶಂಕಿಸಲಾಗಿದೆ. 
 
ಘಟನಾ ಸ್ಥಳಕ್ಕೆ ಔರಾದ್ ನಗರದ ಕಮಲಾನಗರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments