Select Your Language

Notifications

webdunia
webdunia
webdunia
webdunia

ಲಾರಿ-ಬೈಕ್ ನಡುವೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು

ಲಾರಿ-ಬೈಕ್ ನಡುವೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು
ಬೆಂಗಳೂರು , ಶುಕ್ರವಾರ, 2 ಅಕ್ಟೋಬರ್ 2015 (12:08 IST)
ಬೈಕ್‌ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಗರದ ಹೊರಮಾವು ಬಳಿಯ ಗಾಂಧಿವೃತ್ತದಲ್ಲಿ ಇಂದು ಬೆಳಗ್ಗೆ ನಡೆದಿದೆ. 
 
ಅಪಘಾತಕ್ಕೀಡಾಗಿ ಸಾವನ್ನಪ್ಪಿದ ವಿದ್ಯಾರ್ಥಿಗಳನ್ನು ಜುರಾಲ್ಡ್ ಕ್ಸೇವಿಯರ್(20) ಮತ್ತು ಕೃಷ್ಣನ್ ಎಂದು ಹೇಳಲಾಗಿದ್ದು, ಈ ಇಬ್ಬರೂ ಕೂಡ ನಗರದ ಕಮ್ಮನಹಳ್ಳಿ ನಿವಾಸಿಗಳಾಗಿದ್ದಾರೆ. ಇಬ್ಬರೂ ಕೂಡ ನಗರದ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದ್ದು, ಎಂಜಿನಿಯರ್ ಪದವೀಧರರು ಎಂದು ತಿಳಿದು ಬಂದಿದೆ.
 
ಇನ್ನು ಬೆಳಗ್ಗೆ ಮನೆಯಿಂದ ಹೊಟಿದ್ದ ಇವರು ಕಾಲೇಜಿಗೆ ತೆರಳಲು ವೊಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದರು. ಈ ವೇಳೆ ಮುಂದೆ ಚಲಿಸುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಇಬ್ಬರೂ ಕೂಡ ಲಾರಿ ಚಕ್ರಕ್ಕೆ ಸಿಲುಕಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಓರ್ವ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಮತ್ತೋರ್ವ ವಿದ್ಯಾರ್ಥಿ ಬೋರಿಂಗ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ ಎನ್ನಲಾಗಿದೆ.
 
ಈ ಸಂಬಂಧ ಹೊರಮಾವು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

Share this Story:

Follow Webdunia kannada