Webdunia - Bharat's app for daily news and videos

Install App

ಲಾರಿ-ಬೈಕ್ ನಡುವೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು

Webdunia
ಶುಕ್ರವಾರ, 2 ಅಕ್ಟೋಬರ್ 2015 (12:08 IST)
ಬೈಕ್‌ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಗರದ ಹೊರಮಾವು ಬಳಿಯ ಗಾಂಧಿವೃತ್ತದಲ್ಲಿ ಇಂದು ಬೆಳಗ್ಗೆ ನಡೆದಿದೆ. 
 
ಅಪಘಾತಕ್ಕೀಡಾಗಿ ಸಾವನ್ನಪ್ಪಿದ ವಿದ್ಯಾರ್ಥಿಗಳನ್ನು ಜುರಾಲ್ಡ್ ಕ್ಸೇವಿಯರ್(20) ಮತ್ತು ಕೃಷ್ಣನ್ ಎಂದು ಹೇಳಲಾಗಿದ್ದು, ಈ ಇಬ್ಬರೂ ಕೂಡ ನಗರದ ಕಮ್ಮನಹಳ್ಳಿ ನಿವಾಸಿಗಳಾಗಿದ್ದಾರೆ. ಇಬ್ಬರೂ ಕೂಡ ನಗರದ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದ್ದು, ಎಂಜಿನಿಯರ್ ಪದವೀಧರರು ಎಂದು ತಿಳಿದು ಬಂದಿದೆ.
 
ಇನ್ನು ಬೆಳಗ್ಗೆ ಮನೆಯಿಂದ ಹೊಟಿದ್ದ ಇವರು ಕಾಲೇಜಿಗೆ ತೆರಳಲು ವೊಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದರು. ಈ ವೇಳೆ ಮುಂದೆ ಚಲಿಸುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಇಬ್ಬರೂ ಕೂಡ ಲಾರಿ ಚಕ್ರಕ್ಕೆ ಸಿಲುಕಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಓರ್ವ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಮತ್ತೋರ್ವ ವಿದ್ಯಾರ್ಥಿ ಬೋರಿಂಗ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ ಎನ್ನಲಾಗಿದೆ.
 
ಈ ಸಂಬಂಧ ಹೊರಮಾವು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments