Webdunia - Bharat's app for daily news and videos

Install App

ಇಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದವ ಭೀಕರವಾಗಿ ಸತ್ತುಬಿಟ್ಟ!

Webdunia
ಮಂಗಳವಾರ, 11 ಡಿಸೆಂಬರ್ 2018 (14:55 IST)
ಆತ ಎಂದಿನಂತೆ ಇಟ್ಟಿಗೆಗಳನ್ನು ತುಂಬಿಕೊಂಡು ವಾಹನ ಚಲಾಯಿಸುತ್ತಿದ್ದ. ಆದರೆ ಆತನ ಬಾಳಲ್ಲಿ ವಿಧಿ ಆಟವೇ ಬೇರೆಯಾಗಿತ್ತು. ಚಲಿಸುತ್ತಿದ್ದ ವಾಹನದಲ್ಲಿಯೇ ಭೀಕರವಾಗಿ ಸಾವನ್ನಪ್ಪಿದ್ದಾನೆ.

ಟ್ರಾಕ್ಟರ್ ಇಂಜಿನ್ ಮುಗುಚಿ ಚಾಲಕ ಸಾವನ್ನಪ್ಪಿದ್ದಾನೆ. ಮಧುಗಿರಿ ಪಟ್ಟಣದ ಸಮೀಪ ಇರುವ ವಾಲ್ಮೀಕಿ ಬಡಾವಣೆಯಲ್ಲಿ ಅಪಘಾತ ಸಂಭವಿಸಿದೆ. ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ  ಟ್ರಾಕ್ಟರ್ ಇಂಜಿನ್ ಮುಗುಚಿ ಈ ಘಟನೆ ನಡೆದಿದೆ.  
ತುಮಕೂರು ಜಿಲ್ಲೆಯ ಪುರವರ ಗ್ರಾಮದ ನಿವಾಸಿ ಟ್ಯಾಕ್ಟರ್ ಚಾಲಕ ರಂಗನಾಥ್ (28) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಇಂಜಿನ್ ಹಾಗೂ ಟ್ರೈಲರ್ ನಡುವೆ ಸಿಲುಕಿ ಚಾಲಕ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ. ಟ್ರಾಕ್ಟರ್ ನಲ್ಲಿದ್ದ  ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ಅರಳಾಪುರದಿಂದ ಮಧುಗಿರಿಗೆ ಇಟ್ಟಿಗೆ ತುಂಬಿಕೊಂಡು ಬಂದಿದ್ದ ಟ್ರಾಕ್ಟರ್ ಇದಾಗಿತ್ತು. ಟ್ರಾಕ್ಟರ್ ಇಂಜಿನ್ ಹಾಗೂ ಟ್ರೈಲರ್ ನಡುವೆ ಸಿಲುಕಿರುವ ಮೃತದೇಹವನ್ನು ಜೆಸಿಬಿ ಬಳಸಿ ಹೊರತೆಗೆಯಲಾಯಿತು. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments