Select Your Language

Notifications

webdunia
webdunia
webdunia
webdunia

ತಮಿಳುನಾಡಿನಲ್ಲಿ ಭೀಕರ ಅಪಘಾತ: 9 ಮಂದಿ ದುರ್ಮರಣ

ತಮಿಳುನಾಡಿನಲ್ಲಿ ಭೀಕರ ಅಪಘಾತ: 9 ಮಂದಿ ದುರ್ಮರಣ
ದಿಂಡಿಗಲ್ , ಶುಕ್ರವಾರ, 3 ಏಪ್ರಿಲ್ 2015 (09:38 IST)
ಟ್ಯಾಂಕರ್‌ವೊಂದಕ್ಕೆ ಕ್ವಾಲಿಸ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕ್ವಾಲಿಸ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕೊಡೈಕೆನಾಲ್ ಬಳಿ ನಡೆದಿದೆ.
 
ತಮಿಳುನಾಡಿನ ದಿಂಡಿಗಲ್ ಬಳಿ ಇರುವ ವತ್ತಲಗುಂಡು ರಸ್ತೆಯ ಸಿದ್ದಯ್ಯನಕೋಟೆ ಬಳಿ ಈ ದುರಂತ ಸಂಭವಿಸಿದ್ದು, ಟೊಯೋಟಾ ಕ್ವಾಲಿಸ್ ನಲ್ಲಿದ್ದ 9 ಮಂದಿ ಮೃತರಾಗಿದ್ದಾರೆ. ಮೃತರೆಲ್ಲರೂ ತಮಿಳುನಾಡಿನ ಅರವಕುಂಚಿ ನಿವಾಸಿಗಳಾಗಿದ್ದು, ಕೊಡೈಕೆನಾಲ್‌ನಿಂದ ಸಿದ್ದಯ್ಯನಕೋಟೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ದಿಂಡಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನಾ ಸ್ಥಳವನ್ನು ಪರಿಶೀಲಿಸಿದ್ದಾರೆ. ಅಲ್ಲದೆ ತನಿಖೆ ಮುಂದುವರಿಸಿದ್ದಾರೆ. 

Share this Story:

Follow Webdunia kannada