Webdunia - Bharat's app for daily news and videos

Install App

ದಶಪಥ ಹೆದ್ದಾರಿಯಲ್ಲಿ ಮತ್ತೆ ಅಪಘಾತಗಳು

Webdunia
ಗುರುವಾರ, 12 ಅಕ್ಟೋಬರ್ 2023 (19:00 IST)
ಅಪಘಾತಗಳ ಹಾಟ್‌ಸ್ಪಾಟ್‌ ಹಾಗೂ ಟೋಲ್‌ ರದ್ದಾಂತಗಳಿಂದ ಕೆಲ ದಿನಗಳಿಂದ ದೂರ ಉಳಿದಿದ್ದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಮತ್ತೆ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಅನೇಕ ಯೋಜನೆಗಳು ಸ್ಥಗಿತಗೊಂಡಿದ್ದು, ಸಂಚಾರ ವಿಭಾಗದ ಎಡಿಜಿಪಿ ಆಗಿದ್ದ ಅಲೋಕ್‌ ಕುಮಾರ್‌ ಅವರ ವರ್ಗಾವಣೆ ಬಳಿಕ ಹೈವೇ ಮತ್ತೆ ಅಧ್ವಾನಗೊಳ್ಳುತ್ತಿದೆ. 118 ಕಿ.ಮೀ ಎಕ್ಸ್‌ಪ್ರೆಸ್‌ವೇಯಲ್ಲಿ ರೆಸ್ಟ್‌ ಏರಿಯಾ ನಿರ್ಮಾಣ, ಹೆಲಿಪ್ಯಾಡ್‌ ಸೇರಿದಂತೆ ಒಂದಷ್ಟು ಕಾಮಗಾರಿಗಳಿಗೆ 1 ಸಾವಿರ ಕೋಟಿ ಅನುದಾನ ಹೆಚ್ಚುವರಿಯಾಗಿ ಕೇಳಲಾಗಿತ್ತು. ಚನ್ನಪಟ್ಟಣ-ರಾಮನಗರ ನಡುವೆ ರೆಸ್ಟ್‌ ಏರಿಯಾ ನಿರ್ಮಿಸಿ, ಸ್ಥಳೀಯ ಮಾರುಕಟ್ಟೆಗಳಿಗೆ ಅವಕಾಶ ನೀಡುವ ಭರವಸೆ ನೀಡಿಯೇ ವರ್ಷ ಕಳೆದಿವೆ. ಎಡಿಜಿಪಿ ಅಲೋಕ್‌ ಕುಮಾರ್‌ ಅವರ ವರ್ಗಾವಣೆ ಬಳಿಕ ಮತ್ತೆ ಅಪಘಾತಗಳು ಶುರುವಾಗಿವೆ. ಇನ್ನು ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಾಧಿಕಾರದ ಯೋಜನಾ ನಿರ್ದೇಶಕರೊಂದಿಗೆ ಸಭೆ ನಡೆಸಿ, ನಿರ್ದೇಶನ ನೀಡಲಾಗುವುದು. ಕ್ಯಾಮೆರಾ ಅಳವಡಿಕೆ ಬಗ್ಗೆ ಮಾಹಿತಿ ಕೇಳಲಾಗುವುದು ಎಂದು ರಾಮನಗರ ಜಿಲ್ಲಾಧಿಕಾರಿ ಅವಿನಾಶ್‌ ಮೆನನ್‌ ರಾಜೇಂದ್ರನ್‌ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments