Webdunia - Bharat's app for daily news and videos

Install App

ಬೆತ್ತಲೆ ವಿಡಿಯೋ ವಂಚಕ ಭೋಪಾಲ್ ನಲ್ಲಿ ಅರೆಸ್ಟ್

Webdunia
ಮಂಗಳವಾರ, 18 ಜನವರಿ 2022 (15:12 IST)
ಮರ್ಯಾದೆಗೆ ಅಂಜಿ ಕೆಂಗೇರಿ- ಹೆಜ್ಜಾಲ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ 25 ವರ್ಷದ ವೈದ್ಯನ ಸಾವಿಗೆ ಬೆಂಗಳೂರು ಸಿಟಿ ರೈಲ್ವೆ ಪೊಲೀಸರು ನ್ಯಾಯ ಕೊಡಿಸಿದ್ದಾರೆ. ಆದರೆ ಮಗನನ್ನು ಕಳೆದುಕೊಂಡ ನೋವು, ಸಮಾಜದ ಎದುರು ಬದುಕಲಾಗದೇ ಮೃತ ವೈದ್ಯನ ಹೆತ್ತವರು ಮನೆಯನ್ನೇ ಮಾರಿ ಜಾಗ ಖಾಲಿ ಮಾಡುತ್ತಿದ್ದಾರೆ.
ಕೆಂಗೇರಿ ಹೆಜ್ಜಾಲ ರೈಲು ಮಾರ್ಗದಲ್ಲಿ 25 ವರ್ಷ ವಯಸ್ಸಿನ ಯುವಕನ ಮೃತದೇಹ ಸಿಕ್ಕಿತ್ತು. ಪರಿಶೀಲನೆ ನಡೆಸಿದಾಗ ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ್ದ ಎಂಬಿಬಿಎಸ್ ವಿದ್ಯಾರ್ಥಿ ಎಂಬ ವಿಚಾರ ಬಯಲಾಗಿತ್ತು. ಈ ಕುರಿತು ಬೆಂಗಳೂರು ಸಿಟಿ ರೈಲ್ವೇ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು.
 
ಪ್ರಕರಣದ ತನಿಖೆ ನಡೆಸಿದಾಗ, ವೈದ್ಯ ಒಂದು ಎಡವಟ್ಟು ಮಾಡಿಕೊಂಡಿದ್ದ. ನ್ಯೂಡ್ ಕಾಲ್ ಆಸೆಗೆ ಬಿದ್ದಿದ್ದ ಈ ವೈದ್ಯ ವಿದ್ಯಾರ್ಥಿ ಯನ್ನೇ ಸೈಬರ್ ವಂಚಕನೊಬ್ಬ ಬೆತ್ತಲೆ ಮಾಡಿ ವಿಡಿಯೋ ಮಾಡಿದ್ದ. ಯುವತಿ ಸೋಗಿನಲ್ಲಿ ಕರೆ ಮಾಡಿದ್ದ ವೈದ್ಯ ವಿದ್ಯಾರ್ಥಿಯ ಬೆತ್ತಲೆ ವಿಡಿಯೋ ಮಾಡಿಕೊಂಡಿದ್ದ ಸೈಬರ್ ವಂಚಕ ಹಣ ನೀಡುವಂತೆ ಪೀಡಿಸಿದ್ದ. ಆರಂಭದಲ್ಲಿ ಒಂದಷ್ಟು ಹಣ ಪಾವತಿಸಿದ್ದ ವಿದ್ಯಾರ್ಥಿ ಆ ಬಳಿಕ ನಿರಾಕರಣೆ ಮಾಡಿದ್ದ. ಅಂತಿಮವಾಗಿ 67 ಸಾವಿರ ರೂ. ಹಣ ನೀಡದಿದ್ದರೆ ನಿನ್ನ ವಿಡಿಯೋ ಬಿಡುಗಡೆ ಮಾಡುವುದಾಗಿ ಹೆದರಿಸಿದ್ದ. ಹಣ ನೀಡದ ಕಾರಣ ವೈದ್ಯನ ಸಂಪರ್ಕ ಸಂಖ್ಯೆ ಹಾಗೂ ಸಾಮಾಜಿಕ ಜಾಲ ತಾಣದಲ್ಲಿ ಬೆತ್ತಲೆ ವಿಡಿಯೋ ಬಿಡುಗಡೆ ಆಗಿತ್ತು.
 
ಇದರಿಂದ ಮರ್ಯಾದೆಗೆ ಅಂಜಿ ಕೆಂಗೇರಿ- ಹೆಜ್ಜಾಲ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಆತ್ಮಹತ್ಯೆಗೂ ಮುನ್ನ ತನ್ನ ಐಪೋನ್‌ನಲ್ಲಿ ಸಾವಿನ ಎಲ್ಲಾ ವಿಚಾರವನ್ನು ಬರೆದಿಟ್ಟಿದ್ದ. ಐಪೋನ್ ಕರೆ ಜಾಡು ಹಿಡಿದು ತನಿಖೆ ನಡೆಸಿದ ಸಿಟಿ ರೈಲ್ವೇ ಪೊಲೀಸರು, ಭೋಪಾಲ್‌ನಲ್ಲಿರುವ ವಂಚಕನನ್ನು ಬಂಧಿಸಿದ್ದಾರೆ. ಆತನನ್ನು ಬಂಧಿಸುವ ವೇಳೆ ಆತನ ಇಡೀ ಕುಟುಂಬಕ್ಕೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಭಯ ಬಿದ್ದು ಆತನನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments