ತಾಯಿಯ ಹತ್ಯೆಗೆ ಮಗಳ ಸ್ಕೆಚು

Webdunia
ಗುರುವಾರ, 30 ಡಿಸೆಂಬರ್ 2021 (16:02 IST)
ಅಕ್ರಮವಾಗಿ ಆಸ್ತಿ ಕಬಳಿಸಿ ವಿಲಾಸಿ ಜೀವನ ನಡೆಸುವ ಉದ್ದೇಶದಿಂದ ನಡುರಸ್ತೆಯಲ್ಲೆ ಪತ್ನಿಯನ್ನು ಬರ್ಬರವಾಗಿ ಕೊಲೆಮಾಡಿದ್ದ 2ನೇ ಪತಿ ಮತ್ತು ಮಗಳು ಯುವಿಕಾ ಸೇರಿ 7 ಮಂದಿ ಆರೋಪಿಗಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.
ಅರ್ಚನಾ ರೆಡ್ಡಿಯವರ ಎರಡನೇ ಪತಿ ನವೀನ್ ಕುಮಾರ್,ಮಗಳು ಯುವಿಕಾ ಮತ್ತು ಸಂತೋಷ್ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಅರ್ಚನಾ ಅವರ ಮಗಳು ಯುವಿಕಾ ರೆಡ್ಡಿ (21)ಬಿಕಾಂ ವಿದ್ಯಾಬ್ಯಾಸ ಮಾತಿದ್ದು, ಈಕೆ ನವೀನ್ ಜತೆ ಸೇರಿ ತನ್ನ ತಾಯಿ ಅರ್ಚನಾ ರೆಡ್ಡಿ ಕೊಲೆಗೆ ಸಂಚು ರೂಪಿಸಿದ್ದಳು ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ಈ ಸಂಜೆಗೆ ತಿಳಿಸಿದ್ದಾರೆ. ಡಿ.27ರಂದು ಜಿಗಣಿ ಪುರಸಭೆಗೆ ಮತದಾನಕ್ಕೆ ತೆರಳಿದ್ದ ಅರ್ಚನಾ ರೆಡ್ಡಿ ರಾತ್ರಿ 11ಗಂಟೆಯಲ್ಲಿ ತಾವು ವಾಸವಿದ್ದ ಬೆಳ್ಳಂದೂರಿಗೆ ವಾಪಾಸ್ಸಾಗುತ್ತಿದ್ದರು.
 
ಇವರನ್ನು ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಹೊಸರೋಡ್ ಜಂಕ್ಷನ್ ಬಳಿಯ ರಸ್ತೆಯಲ್ಲಿ ಬರುತ್ತಿದ್ದಂತೆ ಕಾರನ್ನು ಅಡ್ಡಗಟ್ಟಿ , ಕಾರಿನ ಗಾಜು ಹೊಡೆದು, ಅರ್ಚನಾ ರೆಡ್ಡಿಗೆ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಿದ್ದರು. ಇದರಿಂದ ತೀವ್ರವಾಗಿ ಗಾಯಗೊಂಡ ಅರ್ಚನಾ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದರು. ದಾಳಿಯ ಸಂದರ್ಭದಲ್ಲಿ ಅರ್ಚನಾ ಅವರೊಂದಿಗೆ ಇದ್ದ ಮಗ ಹಾಗೂ ಚಾಲಕ ಕಾರಿನಿಂದ ಇಳಿದು ಓಡಿ ಹೋಗಿ ತಪ್ಪಿಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments