Webdunia - Bharat's app for daily news and videos

Install App

ಹುಬ್ಬಳ್ಳಿ ಯುವತಿ ಅಂಜಲಿ ಹತ್ಯೆಗೆ ಆರೋಪಿ ಗಿರೀಶನಿಗೆ ಸ್ನೇಹಿತನೇ ಪ್ರೇರಣೆ

Krishnaveni K
ಗುರುವಾರ, 16 ಮೇ 2024 (10:01 IST)
Photo Courtesy: Twitter
ಹುಬ್ಬಳ್ಳಿ: ನೇಹಾ ಹಿರೇಮಠ್ ಮಾದರಿಯಲ್ಲೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಅಂಜಲಿ ಹತ್ಯೆ ಪ್ರಕರಣದ ಆರೋಪಿ ಗಿರೀಶನಿಗೆ ಆತನ ಸ್ನೇಹಿತನೇ ಸ್ಪೂರ್ತಿಯಾಗಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ.

ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ಅಂಜಲಿಯ ಮನೆಗೆ ನುಗ್ಗಿ ಹೊಟ್ಟೆಗೆ, ಎದೆಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆ ಮಾಡಿದ್ದ. ಮನೆಯವರ ಸಮ್ಮುಖದಲ್ಲೇ ಈ ಹತ್ಯೆ ನಡೆದಿತ್ತು. ಕೃತ್ಯದ ಬಳಿಕ ಸ್ಥಳದಿಂದ ಆರೋಪಿ ಪರಾರಿಯಾಗಿದ್ದ. ಇದಕ್ಕೆ ಮೊದಲು ತಾನು ಕರೆದಲ್ಲಿಗೆ ಬರದೇ ಇದ್ದರೆ ನೇಹಾ ಮಾದರಿಯಲ್ಲೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಘಟನೆ ಬಳಿಕ ಆರೋಪಿ ಇದುವರೆಗೆ ಪೊಲೀಸರ ಕೈಗೆ ಸಿಗದೇ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಪೊಲೀಸರು ಎರಡು ತಂಡಗಳನ್ನು ರಚಿಸಿ ಹುಡುಕಾಟ ನಡೆಸುತ್ತಿದೆ. ಆರೋಪಿ ಗಿರೀಶನಿಗೆ ಸ್ನೇಹಿತ ಶೇಷ್ಯಾನೇ ಈ ಕೃತ್ಯಕ್ಕೆ ಪ್ರೇರಣೆ ಎಂದು ತಿಳಿದುಬಂದಿದೆ.

ಶೇಷ್ಯಾ ಕೂಡಾ ಎರಡು ದಿನಗಳ ಹಿಂದಷ್ಟೇ ಓರ್ವ ಯುವಕನನ್ನು ಹತ್ಯೆ ಮಾಡಿ ಜೈಲು ಸೇರಿದ್ದ. ಆತನ ಪ್ರೇರಣೆಯಿಂದಲೇ ಗಿರೀಶ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಇದಕ್ಕೆ ಮೊದಲು ಸಣ್ಣ ಪುಟ್ಟ ಕಳ್ಳತನ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಗಿರೀಶ ಈಗ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments