Webdunia - Bharat's app for daily news and videos

Install App

ಕಾಡಾನೆ ಕೊಂದು ದಂತ ಮಾರುವ ವೇಳೆ ಸಿಕ್ಕಿಬಿದ್ದ ಆರೋಪಿಗಳು

Webdunia
ಭಾನುವಾರ, 20 ಮಾರ್ಚ್ 2022 (17:32 IST)
ಕಾಡಾನೆ ಕೊಂದು ದಂತ ತೆಗೆದು ಮಾರಾಟ ಮಾಡೋ ವೇಳೆ ಆರೋಪಿಗಳು ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆನೆ ಹೂತಿದ್ದ ಸ್ಥಳದಲ್ಲಿ ಆನೆ ಮೃತದೇಹ ತೆಗೆದು ಮರಣೋತ್ತರ (Postmortem) ಪರೀಕ್ಷೆ ಮಾಡಲಾಗಿದೆ. ಅರಣ್ಯ ತನಿಖಾ ದಳದ ಡಿಸಿಎಫ್ ರವೀಂದ್ರ ನೇತೃತ್ವದಲ್ಲಿ ಸ್ಥಳ ಮಹಜರ್ ಮಾಡಲಾಗಿದ್ದು, ನೆನ್ನೆ ಆನೆ ದಂತ ಮಾರಾಟಮಾಡಲು ಮುಂದಾಗಿದ್ದ ವೇಳೆ ಮೂರು ಆರೋಪಿಗಳ ಬಂಧನ ಮಾಡಲಾಗಿದೆ. ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ಹಾಸನ ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ ಬೆಳೆ ರಕ್ಷಣೆಗಾಗಿ ಅಕ್ರಮ ವಿದ್ಯುತ್ ಹರಿಸಿದ್ದ ವೇಳೆ ಕಾಡಾನೆ ಬಲಿಯಾಗಿದೆ. ಆನೆ ಮೃತ ಪಟ್ಟಾಗ ಮಾಹಿತಿ ಮುಚ್ಚಿಟ್ಟು ಆನೆಯನ್ನ ಆರೋಪಿ ಹೂತಿದ್ದ. ವೀರಾಪುರ ಗ್ರಾಮದ ಚಂದ್ರೇಗೌಡ,ನಾಗರಾಜ್, ತಿಲಕ್​ರಿಂದ ಕೃತ್ಯವ್ಯಸಗಲಾಗಿದೆ. ಆರು ತಿಂಗಳ ಹಿಂದೆ ಆನೆ ಕರೆಂಟ್ ಶಾಕ್​ನಿಂದ ಕಾಡಾನೆ ಸಾವನ್ನಪ್ಪಿದೆ. ಆನೆ ಮೃತದೇಹ ಕೊಳೆತ ಬಳಿಕ ಮತ್ತೆ ಹೂತಿದ್ದಾರೆ. ಬಳಿಕ ಕಾಡಾನೆಯಿಂದ ದಂತ ಕಿತ್ತು ಮಾರಾಟಕ್ಕೆ ಯತ್ನಿಸಿದ್ದಾರೆ. ಕೋಟ್ಯಾಂತರ ರೂ. ಮೌಲ್ಯಕ್ಕೆ ದಂತ ಮಾರಾಟ ಮಾಡಲು ಆರೋಪಿಗಳು ಸಜ್ಜಾಗಿದ್ದು, ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಆನೆ ಕಳೇಬರ ಹೊರತೆಗೆದು ಪರೀಕ್ಷೆ ಮಾಡಲಾಗಿದೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments