Webdunia - Bharat's app for daily news and videos

Install App

ಅತ್ಯಾಚಾರ, ಕೊಲೆ ಆರೋಪಿಗಳು ವಶಕ್ಕೆ

Webdunia
ಗುರುವಾರ, 3 ನವೆಂಬರ್ 2022 (18:34 IST)
ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗ್ರಾಮವೊಂದರಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಆಳಂದ ಪೊಲೀಸರು 24 ಗಂಟೆಗಳಲ್ಲಿ ಭೇದಿಸಿದ್ದಾರೆ. ನವೆಂಬರ್​​​​ 1ರಂದು ಮಧ್ಯಾಹ್ನ ಬಾಲಕಿಯ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಭೇದಿಸಲು ಕಲಬುರಗಿ SP ಇಶಾ ಪಂತ್ ವಿಶೇಷ ತಂಡವನ್ನು ರಚಿಸಿದ್ದರು. ಈ ವಿಶೇಷ ತಂಡ ಕೆಲ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಬಾಲಕಿ ವಾಸವಿದ್ದ ಗ್ರಾಮದ 16 ವರ್ಷದ ಬಾಲಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾಗಿ ತಿಳಿದು ಬಂದಿದೆ. ಸದ್ಯ ಕೃತ್ಯ ನಡೆಸಿದ ಆರೋಪಿಯನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಗ್ರಾಮದಲ್ಲಿಯೇ ಇದ್ದ 17 ವರ್ಷದ ಬಾಲಕನೇ, ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ. ಬಾಲಕಿಯನ್ನು ಹತ್ಯೆ ಮಾಡಿದವರನ್ನು ಬಂಧಿಸುವಂತೆ ನಿನ್ನೆ ಯುವಕರ ಗುಂಪು ಪ್ರತಿಭಟನೆಯನ್ನು ಮಾಡಿತ್ತು. SP ಇಶಾ ಪಂತ್ ಪ್ರಕರಣ ಭೇದಿಸಿದ ಸಿಬ್ಬಂದಿಗೆ 1 ರೂ ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇನ್ನು ಶೀಘ್ರದಲ್ಲೇ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಜನರು ಫಿದಾ ಆಗಿದ್ದು, ಅಭಿನಂದನೆ ತಿಳಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments