Select Your Language

Notifications

webdunia
webdunia
webdunia
webdunia

ಹೊಯ್ಸಳ ಪೊಲೀಸ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಹೊಯ್ಸಳ ಪೊಲೀಸ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಬೆಂಗಳೂರು , ಮಂಗಳವಾರ, 31 ಅಕ್ಟೋಬರ್ 2017 (08:57 IST)
ಬೆಂಗಳೂರು: ದುಷ್ಕರ್ಮಿಗಳ ತಂಡ ಜಾಲಹಳ್ಳಿ ಪೊಲೀಸ್ ಹೊಯ್ಸಳ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆ  ನಿನ್ನೆ ತಡರಾತ್ರಿ ನಡೆದಿದೆ.

ಎರಡು ಡಿಯೋ ಬೈಕ್ ನಲ್ಲಿ ಮುಸುಕು ಹಾಕಿಕೊಂಡು ನಾಲ್ವರು ಸುಲಿಗೆಕೋರರು ಈ ಕೃತ್ಯವೆಸಗಿದ್ದಾರೆ. ನಗರದ ಬಿಇಎಲ್ ಸರ್ಕಲ್‍ ನಲ್ಲಿ ರಾತ್ರಿ 2.30ರ ಸುಮಾರಿಗೆ ಪಾರ್ಕ್ ಮಾಡಿದ್ದ ಕ್ಯಾಬ್ ಚಾಲಕರಿಗೆ ಲಾಂಗ್ ತೋರಿಸಿ ಹಣ, ಪರ್ಸ್, ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.

ಹಣ ಕಳೆದುಕೊಂಡ ಕ್ಯಾಬ್ ಚಾಲಕ ಕೂಡಲೇ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ದೂರು ನೀಡಿದ್ದಾರೆ. ಈ ವೇಳೆ ರಾತ್ರಿ ಗಸ್ತಿನಲ್ಲಿದ್ದ ಜಾಲಹಳ್ಳಿ ಪೊಲೀಸ್ ಹೊಯ್ಸಳ ಸಿಬ್ಬಂದಿ ದರೋಡೆಕೋರರ ಬೆನ್ನು ಹತ್ತಿದ್ದು, ಸಿಬ್ಬಂದಿ ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ದುಷ್ಕರ್ಮಿಗಳು ಲಾಂಗ್ ನಿಂದ ಹಲ್ಲೆ ಮಾಡಿದ್ದಾರೆ. ಪರಿಣಾಮ ಹೋಂ ಗಾರ್ಡ್ ಹನುಮಂತರಾಜು ತಲೆಗೆ ಗಂಭೀರ ಗಾಯವಾಗಿದೆ.

ಸದ್ಯ ಹೋಂ ಗಾರ್ಡ್ ಹನುಮಂತರಾಜುರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಯ್ಸಳದಲ್ಲಿದ್ದ ಎಎಸ್‍ಐ ಮೋಪುರಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಸಂಬಂಧ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶುಕ್ರವಾರದವರೆಗೆ ಮಳೆಯ ಭೀತಿ?