Webdunia - Bharat's app for daily news and videos

Install App

ಗೌರಿಬಿದನೂರು: ಬಡಮಹಿಳೆ ಮೇಲೆ ಎಸಿಡ್ ದಾಳಿ

Webdunia
ಸೋಮವಾರ, 24 ನವೆಂಬರ್ 2014 (09:17 IST)
ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳ ಮೇಲೆ ಅಪರಿಚಿತ ದುಷ್ಕರ್ಮಿಗಳು ಎಸಿಡ್ ದಾಳಿ ನಡೆಸಿದ ಪ್ರಕರಣ  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಲಕ್ಷ್ಮಮ್ಮ ಎಂಬ 40 ವರ್ಷದ ಮಹಿಳೆ ಬಸ್ ಹತ್ತಲೆಂದು ಪೆಟ್ರೋಲ್ ಬಂಕ್ ಬಳಿ ಇದ್ದ ಬಸ್ ನಿಲ್ದಾಣವೊಂದರಲ್ಲಿ ನಿಂತಿದ್ದರು. ಆಗ ಬುರ್ಖಾ ಧರಿಸಿದ್ದ ಇಬ್ಬರು ಅವರ ಬಳಿ ಬಂದ ಬಂದು ಮೈಮೇಲೆ ಎಸಿಡ್ ಎರಚಿ ಪರಾರಿಯಾಗಿದ್ದಾರೆ.
 
ಪೀಡಿತಳ ಬಲಗೈ, ಭುಜ ಮತ್ತು ಕಣ್ಣಿಗೆ ಗಾಯಗಳಾಗಿದ್ದು ಅವರನ್ನು ಗೌರಿಬಿದನೂರು ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ.
 
ಕೂಲಿ ಕೆಲಸ ಮಾಡಿಕೊಂಡಿರುವ ಬಡ ಮಹಿಳೆಯ ಮೇಲೆ ನಡೆದ ಈ ಅಮಾನುಷ ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಪಿಯುಸಿ ಓದುತ್ತಿರುವ ಆಕೆಯ ಮಗಳನ್ನು ಮದುವೆ ಮಾಡಿಕೊಡುವಂತೆ ಕೆಲವು ಯುವಕರು ಆಕೆಗೆ ಒತ್ತಾಯಿಸಿದ್ದರು. ಆದರೆ ಆಕೆ ಓದಬೇಕೆಂಬ ಕಾರಣ ನೀಡಿ  ಮದುವೆ ಮಾಡಿಕೊಡಲು ನಿರಾಕರಿಸಲಾಗಿತ್ತು. ಈ ಕಾರಣಕ್ಕೆ ಕೋಪದಿಂದ ದುಷ್ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ.
 
ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕೃತ್ಯ ನಡೆದ ಸ್ಥಳದಲ್ಲಿದ್ದ ಪೆಟ್ರೋಲ್ ಬಂಕ್‌ನಲ್ಲಿದ್ದ ಸಿಸಿ ಟಿವಿ ಕ್ಯಾಮರಾದಲ್ಲಿ  ಸೆರೆಯಾಗಿರುವ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments