Webdunia - Bharat's app for daily news and videos

Install App

ದರ್ಶನ್ ಕೇಸ್ ನಲ್ಲಿ ಹೀರೋ ಆಗಿದ್ದ ಎಸಿಪಿ ಚಂದನ್, ಪುನೀತ್ ಕೆರೆಹಳ್ಳಿ ಕೇಸ್ ನಲ್ಲಿ ಇದೇನು ಮಾಡಿದ್ರು

Sampriya
ಗುರುವಾರ, 24 ಅಕ್ಟೋಬರ್ 2024 (16:49 IST)
Photo Courtesy X
ಬೆಂಗಳೂರು: ಪುನೀತ್ ಕೆರೆಹಳ್ಳಿ ಅವರನ್ನು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಅವಮಾನಿಯವಾಗಿ ನಡೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ಕುಮಾರ್ ವಿರುದ್ಧ ರಾಜ್ಯ ಮಾನವ ಹಕ್ಕು ಆಯೋಗ ತನಿಖೆಗೆ ಆದೇಶಿಸಿದೆ.

ಜುಲೈ 26ರಂದು ರಾತ್ರಿ 9ಗಂಟೆ ಸುಮಾರಿಗೆ ಕಾಮನ್‌ ಪೇಟ್‌ ಪೊಲೀಸರು ಕಾರಣ ತಿಳಿಸದೇ ಬಲವಂತವಾಗಿ ನನ್ನನ್ನು ಠಾಣೆಗೆ ಕರೆದುಕೊಂಡು ಹೋಗಿ ಅವಾಚ್ಯ ಶಬ್ಧಗಳುಇಂದ ನಿಂದಿಸಿದ್ದಾರೆ. ಅದಲ್ಲದೆ ಎಸಿಪಿ ಚಂದನ್ ಕುಮಾರ್‌ ಅವರು ನನಗೆ ಅವಾಚ್ಯ ಶಬ್ಧಗಳಿಂದ ಬೈದು ಲಾಠಿಯಿಂದ ಜೋರಾಗಿ ಹೊಡೆದು, ನಗ್ನಗೊಳಿಸಿ ಲೈಂಗಿಕ ಕಿರುಕುಳ ನೀಡಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ ಎಂದು ಪುನೀತ್ ಕುಮಾರ್ ಅವರು ದೂರಿ, ನ್ಯಾಯ ಒದಗಿಸಿಕೊಡುವಂತೆ ಕೋರಿಕೊಂಡಿದ್ದರು.

ಇದೀಗ ಈ ಸಂಬಂಧ ತನಿಖೆ ನಡೆಸಿ 4ವಾರಗಳಲ್ಲಿ ವರದಿ ಸಲ್ಲಿಸುವಂತೆ ಉಪ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪುನೀತ್ ಕೆರೆಹಳ್ಳಿ ಅವರು, ಎಸಿಪಿ ಚಂದನ್ ವಿರುದ್ಧ ತನಿಖೆಗೆ ಆದೇಶಿಸಿದ ಮಾನವ ಹಕ್ಕು ಆಯೋಗ ಪುನೀತ್ ಕೆರೆಹಳ್ಳಿಯವರನ್ನು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಅವಮಾನಿಯವಾಗಿ ನೆಡೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ವಿರುದ್ಧ ತನಿಖೆಗೆ ಆದೇಶಿಸಿದ ಮಾನವ ಹಕ್ಕು ಆಯೋಗ

ಆದರೆ ಒಬ್ಬ ಎಸಿಪಿ ವಿರುದ್ಧ ಮತ್ತೊಬ್ಬ ಎಸಿಪಿ ಹೇಗೆ ತನಿಖೆ ಮಾಡುತ್ತಾನೆ ಇದರಲ್ಲಿ ತನಿಖೆ ಮಾಡುವ ಅಗತ್ಯ ಏನಿದೆ? ಕೇವಲ ಪ್ರಕರಣ ನೆಡೆದ ದಿನ ಪುನೀತ್ ಕೆರೆಹಳ್ಳಿಯವರನ್ನು ವಿಚಾರಣೆ ನಡೆಸಿದ ಕೊಠಡಿಯ ಸಿಸಿಟಿವಿ ದೃಶ್ಯ ಪರಿಶೀಲಿಸಿದರೆ ಸತ್ಯ ತಿಳಿಯುತ್ತದೆ. ಒಟ್ಟಿನಲ್ಲಿ ಒಬ್ಬ ಕಾಮುಕ ಎಸಿಪಿಯನ್ನು ರಕ್ಷಿಸಲು ಕಾಂಗ್ರೆಸ್ಸ್ ಸರ್ಕಾರ ಮುಂದಾಗಿದೆ ಅಷ್ಟೇ!

ಇದರಲ್ಲಿ ನ್ಯಾಯ ಸಿಗುತ್ತದೆ ಎನ್ನುವ ನಂಬಿಕೆ ನನಗಿಲ್ಲ ಕಾನೂನು ಸಂವಿಧಾನ ಎಲ್ಲಾವೂ ಅಧಿಕಾರ ಮತ್ತು ಹಣ ಭಲ ಇರುವವರ ಪರ ಇರುತ್ತವೆ ಎನ್ನುವುದೇ ಸತ್ಯ @India_NHRC ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ