ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕ್ರಮ:ಜೆ.ಸಿ ಮಾಧುಸ್ವಾಮಿ

Webdunia
ಬುಧವಾರ, 22 ಸೆಪ್ಟಂಬರ್ 2021 (14:25 IST)
ಬೆಂಗಳೂರು : ಇದುವರೆಗೂ ಹಾದಿ- ಬೀದಿಯಲ್ಲಿ ನಡೆಯುತ್ತಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಜಿಲ್ಲೆಯ ಶಾಸಕ ಸಾ. ರಾ ಮಹೇಶ್ ನಡುವಣ ವೈಮನಸ್ಯ ಪರಸ್ಪರ ಆಕ್ರೋಶ ವಿಧಾನಸಭೆಯಲ್ಲಿಂದು ಅನಾವರಣಗೊಂಡಿತು.

ಸರ್ಕಾರದ ಅಧಿಕಾರಿಗಳು ಅಧಿಕಾರಿಗಳಾಗಿಯೇ ಕೆಲಸ ಮಾಡಬೇಕೆ ಹೊರತು ಸರ್ವಾಧಿಕಾರಿಗಳಾಗಬಾರದು. ಇದನ್ನೂ ಸರಕಾರ ಸಹಿಸುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಅಧಿಕಾರಿಗೆ ಎಚ್ಚರಿಕೆ ನೀಡಿದ ಘಟನೆಯೂ ಜರುಗಿತು.
ವಿಧಾನಸಭೆಯ ಶೂನ್ಯವೇಳೆಯಲ್ಲಿಂದು ಸಾ. ರಾ ಮಹೇಶ್ ಅವರು ಮಂಡಿಸಿದ್ದ ಹಕ್ಕು ಚ್ಯುತಿ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಚಿವರು, ಈ ವಿಚಾರದಲ್ಲಿ ಸರ್ಕಾರ ಅಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಕ್ರಮ ತೆಗೆದುಕೊಳ್ಳಲಿದೆ ಎಂದು ಸದನಕ್ಕೆ ತಿಳಿಸಿದರು.
ಅಧಿಕಾರಿ ತನ್ನ ಅಧಿಕಾರದ ವ್ಯಾಪ್ತಿ ಮೀರಿ ವರ್ತನೆ ಮಾಡಿದರೆ ಅವರ ವಿರುದ್ಧ ಕ್ರಮಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ ಎಂದರು. ಈ ಕಾನೂನು ಉಲ್ಲಂಘನೆಯನ್ನು ಯಾರೇ ಮಾಡಿದರು ಅದು ತಪ್ಪಾಗಲಿದೆ ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಇನ್ನೂ ಸದನದಲ್ಲಿ ಹಾಜರಿದ್ದಂತ ಕೆಆರ್ ನಗರ ಶಾಸಕ ಸಾರಾ ಮಹೇಶ್ ಅವರು, ರೋಹಿಣಿ ಸಿಂಧೂರಿ ಅವರು 30 ಲಕ್ಷಕ್ಕೆ ಈಜು ಕೊಳ ನಿರ್ಮಾಣ ಮಾಡಿರುವುದು ಮತ್ತು 15 ಲಕ್ಷಕ್ಕೆ ಕಚೇರಿ ನವೀಕರಣ ಮಾಡಿರುವುದನ್ನು ಸದನದಲ್ಲಿಯೇ ಪೋಟೋ ಸಹಿತ ಪ್ರದರ್ಶನ ಮಾಡಿದರು.
ಬಳಿಕ ಮಾತನಾಡಿದ ಶಾಸಕರು, ಆಧಿಕಾರಿ ಶಾಸಕರ ಹಕ್ಕು, ನಗರಪಾಲಿಕೆ ಹಕ್ಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯ ಹಕ್ಕನ್ನು ಮೊಟಕು ಮಾಡಿ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತನೆ ಮಾಡಿದ್ದಾರೆ. ಕಾನೂನುಬದ್ಧವಾಗಿ ಪ್ರಸ್ತಾಪ ಮಾಡಿದ ಕಾಮಗಾರಿಗಳನ್ನು ಮತ್ತು ಅನುದಾನವನ್ನು ಬದಿಗೆ ಸರಿಸಿ ತಮಗೆ ಬೇಕಾದಂತೆ ಮಾಡಿದ್ದಾರೆ ಹೀಗಾಗಿ ಅವರ ವಿರುದ್ಧ ಹಕ್ಕು ಚ್ಯುತಿ ಕ್ರಮ ಕ್ರಮ ಕೈಗೊಳ್ಳಬೇಕೆಂದು ಸಾ.ರಾ ಮಹೇಶ್ ಸರ್ಕಾರವನ್ನು ಆಗ್ರಹಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಮುಂದಿನ ಸುದ್ದಿ
Show comments