Select Your Language

Notifications

webdunia
webdunia
webdunia
webdunia

ಪ್ರಚೋದನ ಕೃತ್ಯ ಎಸಗಿದವರ ವಿರುದ್ಧ ಕ್ರಮ : ಬೊಮ್ಮಾಯಿ

ಪ್ರಚೋದನ ಕೃತ್ಯ ಎಸಗಿದವರ ವಿರುದ್ಧ ಕ್ರಮ : ಬೊಮ್ಮಾಯಿ
ವಿಜಯನಗರ , ಸೋಮವಾರ, 18 ಏಪ್ರಿಲ್ 2022 (08:14 IST)
ವಿಜಯನಗರ : ಹುಬ್ಬಳ್ಳಿಯಲ್ಲಿ ನಿನ್ನೆ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಆಗಿದೆ ಎಂದು ಬಸವರಾಜ ಬೊಮ್ಮಾಯಿ ಕೆಲ ಪ್ರಚೋದನಾಕಾರಿ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಚೋದನಾಕಾರಿ ಕೃತ್ಯಗಳನ್ನು ಎಸಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ.

ಕೆಲ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಈ ರೀತಿಯ ಸಂಘಟನೆಗಳನ್ನು ಬಿಡುವುದಿಲ್ಲ. ಇದನ್ನು ಕರ್ನಾಟಕ ರಾಜ್ಯ ಸಹಿಸೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದಕ್ಕೆ ಮತ್ತೆ ಬೇರೆ ರೀತಿಯ ರಾಜಕೀಯ ಬಣ್ಣ ಬಳಿಯೋದು ಬೇಡ. ಯಾರೇ ಘಟನೆಯಲ್ಲಿ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು. ಹಳೇ ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮತ್ತೆ ಈ ತರಹದ ಘಟನೆ ಸಂಭವಿಸಬಾರದು. ಕಾನೂನು ಸುವ್ಯವಸ್ಥೆ ಅಡಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ : ಕೇಂದ್ರಕ್ಕೆ ರಾಹುಲ್ ತರಾಟೆ?