Webdunia - Bharat's app for daily news and videos

Install App

ಫೆಬ್ರವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚ ಮಾಡಲು ಕ್ರಮ : ಸಿಎಂ ಸಿದ್ದರಾಮಯ್ಯ ಸೂಚನೆ

Webdunia
ಮಂಗಳವಾರ, 5 ಸೆಪ್ಟಂಬರ್ 2023 (07:27 IST)
ಬೆಂಗಳೂರು : ಪ್ರಸಕ್ತ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಫೆಬ್ರವರಿ ಒಳಗೆ ವೆಚ್ಚ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ಸೋಮವಾರ ಅವರು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಇಂದಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಯೋಜನಾ ಇಲಾಖೆ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧಿ ಮಂಡಳಿ), ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕಳೆದ ವರ್ಷದ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕೆ 46,955 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಪ್ರಸಕ್ತ ವರ್ಷದಲ್ಲಿ 54,374 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಇದು ಸರ್ಕಾರದ ಆಸ್ತಿ ಸೃಜನೆಗೂ ಪೂರಕವಾಗಿರುವುದರಿಂದ ಈ ಅನುದಾನ ಸದ್ಬಳಕೆಯಾಗುವುದನ್ನು ಖಾತರಿಪಡಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಚುನಾವಣೆ ಹಾಗೂ ಆಯವ್ಯಯ ಅನುಮೋದನೆ ವಿಳಂಬವಾದ ಕಾರಣ ಒಟ್ಟಾರೆ ಪ್ರಗತಿಯಲ್ಲಿ ಹಿನ್ನಡೆಯಾಗಿದೆ. ಆದರೆ ಶೀಘ್ರವೇ ನಿಗದಿತ ಗುರಿಯಂತೆ ವೆಚ್ಚ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮೀಣ ರಸ್ತೆಗಳ ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಲು ಸೂಚಿಸಿದ ಮುಖ್ಯಮಂತ್ರಿಗಳು, ಕೆಕೆಆರ್ಡಿಬಿ ಯಡಿ ಕಳೆದ ವರ್ಷದ 2,000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನ ಲಭ್ಯವಿದ್ದು, ಪ್ರಸಕ್ತ ಸಾಲಿನಲ್ಲಿ 3,000 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಆದ್ದರಿಂದ ಶೀಘ್ರವೇ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments