Select Your Language

Notifications

webdunia
webdunia
webdunia
webdunia

ಅಕ್ರಮವಾಗಿ ನುಗ್ಗಿದವರ ಮೇಲೆ ಕ್ರಮ ತೆಗೆದುಕೊಳ್ತೀವಿ : ಮುನಿರತ್ನ

ಅಕ್ರಮವಾಗಿ ನುಗ್ಗಿದವರ ಮೇಲೆ ಕ್ರಮ ತೆಗೆದುಕೊಳ್ತೀವಿ : ಮುನಿರತ್ನ
ಬೆಂಗಳೂರು , ಶನಿವಾರ, 6 ಆಗಸ್ಟ್ 2022 (13:22 IST)
ಬೆಂಗಳೂರು : ಯಾರು ನಗರಾಭಿವೃದ್ಧಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ರು ಅವರನ್ನು ಬಂಧನ ಮಾಡಬೇಕು.
 
ಈ ಕೂಡಲೇ ಅವರನ್ನು ಬಂಧಿಸಬೇಕು ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಅವರನ್ನು ಬಂಧನ ಮಾಡುವಂತೆ ಒತ್ತಾಯ ಮಾಡುತ್ತೇನೆ ಎಂದು ಸಚಿವ ಮುನಿರತ್ನ ತಿಳಿಸಿದ್ದಾರೆ.

ವಾರ್ಡ್ ಮೀಸಲಾತಿ ವಿರೋಧಿಸಿ ಇಂದು ನಗರಾಭಿವೃದ್ಧಿ ಕಚೇರಿ ನುಗ್ಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಸಿಟಿವಿ ದೃಶ್ಯಗಳನ್ನು ಅಧರಿಸಿ ಅಕ್ರಮವಾಗಿ ನುಗ್ಗಿದವರ ಮೇಲೆ ಕ್ರಮ ತೆಗೆದುಕೊಳ್ತೀವಿ.

ಶಾಸಕರು ಬಂದರೆ ಪರವಾಗಿಲ್ಲ. ಅವರ ಬೆಂಬಲಿಗರು ನುಗ್ಗಿದ್ದಾರೆ ಪ್ರತಿಭಟನೆ ಮಾಡಿದ್ದಾರೆ. ಸರ್ವಜ್ಞ ನಗರ, ಚಾಮರಾಜಪೇಟೆ, ಪುಲಕೇಶಿ ನಗರ, ಗಾಂಧಿ ನಗರ, ಬ್ಯಾಟರಾಯನಪುರ ಕ್ಷೇತ್ರದಿಂದ ಬೆಂಬಲಿಗರು ಬಂದು ಗಲಾಟೆ ಮಾಡಿದ್ದಾರೆ. ಜೀವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂಗೆ ಮನವಿ ಮಾಡ್ತೀವಿ ಎಂದಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಉಪರಾಷ್ಟ್ರಪತಿ ಚುನಾವಣೆಗೆ ವೋಟಿಂಗ್