ಡಾ ಸಿಎನ್ ಮಂಜುನಾಥ್ ಗೆಲುವಿಗೆ ಸುಧಾಮೂರ್ತಿ ಹರಕೆ ಹಾಸ್ಯಾಸ್ಪದ ಎಂದ ನಟ ಚೇತನ್ ಅಹಿಂಸಾ

Krishnaveni K
ಶನಿವಾರ, 1 ಜೂನ್ 2024 (09:53 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಗೆಲುವಿಗೆ ಡಾ ಸುಧಾಮೂರ್ತಿ ಹರಕೆ ಹೊತ್ತಿರುವುದು ಹಾಸ್ಯಾಸ್ಪದ ಎಂದು ನಟ ಚೇತನ್ ಅಹಿಂಸಾ ಹೇಳಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಬಲ ನಾಯಕ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿದಿರುವ ಡಾ ಮಂಜುನಾಥ್ ಗಾಗಿ ಸುಧಾಮೂರ್ತಿ ಪಾದಯಾತ್ರೆ ಮಾಡಿ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯುವುದಾಗಿ ಹರಕೆ ಹೊತ್ತಿದ್ದಾರಂತೆ. ಇದನ್ನು ಸ್ವತಃ ಮಂಜುನಾಥ್ ಹೇಳಿಕೊಂಡಿದ್ದರು.

ಆದರೆ ಸುಧಾಮೂರ್ತಿಯವರ ಈ ನಿರ್ಧಾರವನ್ನು ನಟ ಚೇತನ್ ಪ್ರಶ್ನಿಸಿದ್ದಾರೆ. ಮಂಜುನಾಥ್ ಗೆಲುವಿಗಾಗಿ ಸುಧಾಮೂರ್ತಿ ವಾಮ ಮಾರ್ಗ ಹಿಡಿದಿರುವುದು ಹಾಸ್ಯಾಸ್ಪದ ಎಂದು ಚೇತನ್ ಹೇಳಿದ್ದಾರೆ.

‘ಲೋಕಸಭಾ ಚುನಾವಣೆಯಲ್ಲಿ ಸಿಎನ್ ಮಂಜುನಾಥ ಅವರ ಗೆಲುವಿಗೆ ಹರಿಕೆ ಹೊತ್ತಿದ್ದಾರೆ ಇನ್ಫೋಸಿಸ್ ನ ಸುಧಾಮೂರ್ತಿ. ಶ್ರೀಮಂತರು ಮತ್ತು ಗಣ್ಯರು ಯಾವಾಗಲೂ ವ್ಯವಸ್ಥೆಯಿಂದ ರಕ್ತ/ಬೆವರು/ಕಣ್ಣೀರಿನ ಮೂಲಕವಲ್ಲ, ಕುಶಲತೆಯಿಂದ ಪ್ರಯೋಜನ ಪಡೆದಿದ್ದಾರೆ.

ಅಂತೆಯೇ ಸುಧಾಮೂರ್ತಿ ಅವರು ತಮ್ಮ ಅಭ್ಯರ್ಥಿಯ ಗೆಲುವಿಗಾಗಿ ಬೆಂಗಳೂರು ಗ್ರಾಮಾಂತರದ ಬಿಸಿ ಬಿಸಿಲಿನಲ್ಲಿ ಪ್ರಚಾರ ಮಾಡಲಿಲ್ಲ. ಬದಲಿಗೆ ವಿವೇಚನಾರಹಿತ ವಾಮ ಮಾರ್ಗ ತೆಗೆದುಕೊಂಡರು ಎಷ್ಟು ಹಾಸ್ಯಾಸ್ಪದ’ ಎಂದು ಚೇತನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments