ಕಿರುತೆರೆಯಿಂದ ನಟ ಅನಿರುದ್ಧ್​​​ ಔಟ್​​​​

Webdunia
ಶನಿವಾರ, 20 ಆಗಸ್ಟ್ 2022 (18:45 IST)
ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ’ ಸೀರಿಯಲ್​ನ ನಾಯಕ ನಟ ಅನಿರುದ್ಧ್​ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ. ಈ ಮೂಲಕ ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್​ಗೆ ಅವಕಾಶ ಕೊಡದಂತೆ ನಿರ್ಧರಿಸಲಾಗಿದೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ. ನಟ ಅನಿರುದ್ಧ್ ಅವರ ಜೊತೆ ತಂತ್ರಜ್ಞರ ತಂಡ ಮುನಿಸಿಕೊಂಡಿದ್ದು, ಹೀಗಾಗಿ ಅವರನ್ನು ಸೀರಿಯಲ್​ನಿಂದ ಕೈ ಬಿಡಲು ನಿರ್ಧರಿಸಲಾಗಿದೆ. ನಾವು ಅನಿರುದ್ಧ್ ಅವರನ್ನು ಬ್ಯಾನ್ ಮಾಡಿಲ್ಲ. ಆದರೆ ಎರಡು ವರ್ಷ ಅವರನ್ನು ಕಿರುತೆರೆಯಿಂದ ದೂರ ಇಡುತ್ತಿದ್ದೇವೆ ಎಂದು ಭಾಸ್ಕರ್ ತಿಳಿಸಿದ್ದಾರೆ. ಅನಿರುದ್ಧ್ ಅವರು ಜೊತೆ ಜೊತೆಯಲಿ ಧಾರಾವಾಹಿ ತಂಡ ಪ್ರಮುಖರೊಬ್ಬರನ್ನು ಮೂರ್ಖ ಎಂದು ಕರೆದಿದ್ದಾರೆ. ಸ್ಕ್ರಿಪ್ಟ್ ವಿಚಾರಕ್ಕೆ ನಿಂದಿಸಿ ಶೂಟಿಂಗ್ ಸೆಟ್​ನಿಂದ ಹೊರ ಹೋಗಿದ್ದಾರೆ. ಈ ವೇಳೆ ಕಿರಿಕ್ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಕೂಡ ಧಾರವಾಹಿ ತಂಡದ‌ ಜೊತೆ ಜಗಳ ಆಡಿಕೊಂಡು ಅನಿರುದ್ಧ್ ಶೂಟಿಂಗ್ ಮಾಡದೇ ಹೊರ ನಡೆದಿದ್ದರು. ಅವರ ಇಂತಹ ನಡೆಯನ್ನ ಸಹಿಸಿ ಸಾಕಾಗಿದೆ. ಹಲವು‌ ಭಾರಿ ಇಂತಹ ಘಟನೆ ಪುನಾರಾವರ್ತನೆಯಾಗಿದ್ದು, ಹೀಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments