Webdunia - Bharat's app for daily news and videos

Install App

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಎಂದು ಎಲ್ಲೂ ಹೇಳಿಲ್ಲ: ಚೇತನ್ ಅಹಿಂಸಾ

Krishnaveni K
ಬುಧವಾರ, 20 ಮಾರ್ಚ್ 2024 (09:31 IST)
ಬೆಂಗಳೂರು: ಬೆಂಗಳೂರಿನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ಬಗ್ಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಪ್ರತಿಕ್ರಿಯಿಸಿದ್ದಾರೆ.

ಸದಾ ವಿವಾದಾತ್ಮಕ ಹೇಳಿಕೆಯಾಗುವ ಸುದ್ದಿಯಾಗುವ ವಿಚಾರವಾದಿ ಚೇತನ್ ಅಹಿಂಸಾ ಈ ಘಟನೆ ಬಗ್ಗೆ ತಮ್ಮ ಅಭಿಪ್ರಾಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಎಂದು ಪೊಲೀಸರು ಎಫ್ ಐಆರ್ ನಲ್ಲಿ ಉಲ್ಲೇಖಿಸಿಲ್ಲ ಎಂದಿದ್ದಾರೆ.

‘ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಬೆಂಗಳೂರಿನಲ್ಲಿ ಅಂಗಡಿ ಮಾಲಿಕನೊಬ್ಬ ಹೇಳಿಕೊಂಡಿದ್ದಾನೆ. ಎಫ್ ಐಆರ್ ನಲ್ಲಿ ಜೋರಾದ ಸಂಗೀತ ಹೊಡೆಯಲು ಕಾರಣ ಎಂದು ಹೇಳುತ್ತದೆ. ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದ ಯಾವುದನ್ನೂ ಸೇರಿಸಲಾಗಿಲ್ಲ. ಸಮಗ್ರ ಪೊಲೀಸ್ ತನಿಖೆ ಮತ್ತು ಸರಿಯಾದ ಶಿಕ್ಷೆ ಅಗತ್ಯ. ಬಿಜೆಪಿ ಶಾಸಕರು/ಸಂಸದರು ಕೋಮುಗಲಭೆಗೆ ಪ್ರಚೋದನೆ ನೀಡುತ್ತಿರುವುದು ಕಂಡುಬಂದರೆ ಅವರನ್ನೂ ಹೊಣೆಗಾರರನ್ನಾಗಿ ಮಾಡಬೇಕು’ ಎಂದಿದ್ದಾರೆ.

ಸಹಜವಾಗಿಯೇ ಚೇತನ್ ಈ ಹೇಳಿಕೆಗೆ ನೆಟ್ಟಿಗರಿಂದ ಆಕ್ರೋಸ ವ್ಯಕ್ತವಾಗಿದೆ. ಸರಿಯಾಗಿ ವಿಷಯ ತಿಳಿದುಕೊಂಡು ಮಾತನಾಡಿ. ಈಗಾಗಲೇ ಆ ವ್ಯಕ್ತಿ ಮೇಲೆ ಹಲ್ಲೆ ನಡೆಸಲಾಗಿದೆ. ಅದು ಹನುಮಾನ್ ಚಾಲೀಸ ಹಾಕಿದ್ದಕ್ಕೆ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments