Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರದ ವಿರುದ್ಧ ನಟ ಚೇತನ್ ವಾಗ್ದಾಳಿ

ರಾಜ್ಯ ಸರ್ಕಾರದ ವಿರುದ್ಧ ನಟ ಚೇತನ್ ವಾಗ್ದಾಳಿ
ಬೆಂಗಳೂರು , ಶುಕ್ರವಾರ, 9 ಫೆಬ್ರವರಿ 2018 (16:30 IST)
ಬೆಂಗಳೂರು: ಬಿಸಿಯೂಟ ಕಾರ್ಯಕರ್ತರ ಕೂಗು ಸರ್ಕಾರಕ್ಕೆ ಕೇಳಿಸುತ್ತಿಲ್ಲವೇ ಎಂದು ಸ್ಯಾಂಡಲ್ ವುಡ್ ನಟ, ಸಾಮಾಜಿಕ ಹೋರಾಟಗಾರ ಚೇತನ್ ವಾಗ್ದಾಳಿ ನಡೆಸಿದ್ದಾರೆ.
 

ಬಿಸಿಯೂಟ ಕಾರ್ಯಕರ್ತೆಯರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಯಕರ್ತೆಯರ ಜತೆಗಿನ ಸರ್ಕಾರದ ಸಂಧಾನ ಸಭೆಯೂ ವಿಫಲವಾಗಿದೆ.

ಈ ಹಿನ್ನಲೆಯಲ್ಲಿ ನಟ ಚೇತನ್ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಕಾರ್ಯಕರ್ತೆಯರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಚೇತನ್, ಸದ್ದಿಲ್ಲದೇ ಶಾಸಕರು, ಸಚಿವರ ವೇತನ ಹೆಚ್ಚಳವಾಗುತ್ತದೆ. ಆದರೆ ಈ ಬಡವರ ಕೂಗು ರಾಜ್ಯ ಸರ್ಕಾರಕ್ಕೆ ಕೇಳುತ್ತಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಪರವಾದ ವಾತಾವರಣ ನಿರ್ಮಿಸಲು ರಾಜ‌್ಯಕ್ಕೆ ಮೋದಿ ಭೇಟಿ