ಮಹದಾಯಿ ವಿವಾದದ ಬಗ್ಗೆ ಎಡವಟ್ಟು ಹೇಳಿಕೆ ನೀಡಿ ಮಂಗಳಾರತಿ ಮಾಡಿಸಿಕೊಂಡ ನಟ ಚೇತನ್

Webdunia
ಬುಧವಾರ, 27 ಡಿಸೆಂಬರ್ 2017 (11:07 IST)
ಬೆಂಗಳೂರು: ಮಹದಾಯಿ ನೀರಿಗಾಗಿ ರೈತರು ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಕಲಾವಿದರು ಕಾಣಿಸುತ್ತಿಲ್ಲ ಎಂದು ಚಿತ್ರರಂಗದ ಇತರ ನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ನಟ ಚೇತನ್ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
 

ನಟ ಚೇತನ್ ರೈತರ ಹೋರಾಟದಲ್ಲಿ ಪಾಲ್ಗೊಂಡ ಬಳಿಕ ಚೇತನ್ ಇಂತಹದ್ದೊಂದು ಹೇಳಿಕೆ ನೀಡಿದ್ದರು. ಇದಕ್ಕೆ ನಟ ಜಗ್ಗೇಶ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಜಗ್ಗೇಶ್ ಈ ಬಗ್ಗೆ ಟ್ವೀಟ್ ಮಾಡಿದ್ದು ‘ಯಾಕೆ ಪಾಪ ಈತ ಹೀಗೆ..! ಪ್ರತಿ ನಡೆಯ ಉದ್ದೇಶ ಜಾಣ ಪ್ರೇಕ್ಷಕನಿಗೆ ಅರಿವಾಗಿದೆ. ತಮ್ಮತನ ವೃದ್ಧಿಸಿಕೊಳ್ಳುವ ಜಾತ್ರೆಗಿಂತ ಹೃದಯ ದೇವರು ಜನ ಮೆಚ್ಚುವಂತೆ ಮಾಡುವ ಕಾರ್ಯ ಶ್ರೇಷ್ಠ! ಬಣ್ಣ ಹಚ್ಚಿ ಹುಲಿಯಾದ ನರಿ ಕಥೆ ಆಗಬಾರದು ಬದುಕು..! ಎಂದು ತಪರಾಕಿ ನೀಡಿದ್ದಾರೆ.

ಇನ್ನು ಒಳ್ಳೆ ಹುಡುಗ ಪ್ರಥಮ್ ಕೂಡಾ ಖ್ಯಾತೆ ನಟ ಚೇತನ್ ಎಂದು ಕರೆದಿದ್ದು, ನಿಮಗ್ಯಾಕೆ ಯಡಿಯೂರಪ್ಪನವರನ್ನು ಕಂಡರೆ ಕೊತ ಕೊತ? ಮೈಕ್ ಸಿಕ್ಕಿದ ಕೂಡಲೇ ಆಕ್ಷನ್ ಹೀರೋ ರೇಂಜ್ ಗೆ ಹಾರಾಡಬೇಡಿ ಎಂದು ಕಿಡಿ ಕಾರಿದ್ದಾರೆ. ಇದಲ್ಲದೆ, ಅನೇಕ ಅಭಿಮಾನಿಗಳಿಗೂ ಚೇತನ್ ಗೆ ಸಾಮಾಜಿಕ ಜಾಲತಾಣದಲ್ಲಿ ಮಂಗಳಾರತಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಮುಂದಿನ ಸುದ್ದಿ
Show comments