Webdunia - Bharat's app for daily news and videos

Install App

ಅರ್ಜುನ ಆನೆ ಹೆಸರಿನಲ್ಲಿ ನಟ ದರ್ಶನ್ ಗೆ ವಂಚನೆ

Krishnaveni K
ಸೋಮವಾರ, 27 ಮೇ 2024 (12:02 IST)
ಬೆಂಗಳೂರು: ಮೈಸೂರಿನ ಅಂಬಾರಿ ಆನೆ ಅರ್ಜುನನ ಸಮಾಧಿ ನಿರ್ಮಾಣ ವಿಚಾರದಲ್ಲಿ ನಟ ದರ್ಶನ್ ಮತ್ತು ಅವರ ಅಭಿಮಾನಿಗಳಿಗೆ ಓರ್ವ ವ್ಯಕ್ತಿ ಸೋಷಿಯಲ್ ಮೀಡಿಯಾ ಮೂಲಕ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ನಟ ದರ್ಶನ್ ಅಂಬಾರಿ ಆನೆಗೆ ಸಮಾಧಿ ಕಟ್ಟಲು ಮುಂದಾಗಿದ್ದರು. ಇದಕ್ಕಾಗಿ 30 ಸಾವಿರ ರೂ. ಮೌಲ್ಯದ ಕಲ್ಲನ್ನು ಸಮಾಧಿ ಬಳಿ ತರಿಸಿ ಹಾಕಿದ್ದರು. ಆದರೆ ಇದರ ನಡುವೆ ಅರಣ್ಯ ಇಲಾಖೆ ಈ ಹಣವನ್ನು ದರ್ಶನ್ ಮರಳಿಸಿ ತಾನೇ ಸಮಾಧಿ ಕಟ್ಟಲು ಮುಂದಾಗಿದೆ ಎಂದು ವರದಿಯಾಗಿತ್ತು. ಆದರೆ ಅಸಲಿ ಕತೆ ಬೇರೇನೇ ಇದೆ.

ನವೀನ್ ಎಂಬ ವ್ಯಕ್ತಿ ಸೋಷಿಯಲ್ ಮೀಡಿಯಾದಲ್ಲಿ ಅರ್ಜುನ ಪಡೆ ಎಂದು ವ್ಯಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಿ ಹಣ ಸಂಗ್ರಹಣೆ ಮಾಡುತ್ತಿದ್ದಾನೆ. ಈತನ ಮಾತು ನಂಬಿ ಅನೇಕರು ಹಣ ಕಳುಹಿಸಿದ್ದಾರೆ. ಇದರಿಂದ ಆತ ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದಾನೆ. ಅಷ್ಟೇ ಅಲ್ಲ, ದರ್ಶನ್ ಪಿಎಯನ್ನೂ ಸಂಪರ್ಕಿಸಿ ಕಲ್ಲು ತರಿಸಿಕೊಂಡಿದ್ದಾನೆ. ಬಳಿಕ ಅದೇ ಕಲ್ಲನ್ನು ಅರಣ್ಯ ಇಲಾಖೆಗೆ ಮಾರಿ 30 ಸಾವಿರ ರೂ. ಪೀಕಿದ್ದಾನೆ ಎಂದು ತಿಳಿದುಬಂದಿದೆ.

ದರ್ಶನ್ ಏನೋ ಒಳ್ಳೆಯ ಉದ್ದೇಶದಿಂದ ಸಮಾಧಿ ಕಟ್ಟಲು ಸಹಾಯ ಮಾಡಿದ್ದಾರೆ. ಆದರೆ ಅವರ ಅಭಿಮಾನಿ ಎಂದು ಹೇಳಿಕೊಂಡು ಇಲ್ಲೊಬ್ಬವಂಚಕ ಜನರಿಗೇ ಟೋಪಿ ಹಾಕಲು ಪ್ರಯತ್ನಿಸುತ್ತಿದ್ದಾನೆ. ಇಂತಹವರ ಬಗ್ಗೆ ಎಚ್ಚರವಾಗಿರಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments