Webdunia - Bharat's app for daily news and videos

Install App

ಪರಪ್ಪನ ಅಗ್ರಹಾರದಿಂದ ಈ ಜೈಲಿಗೆ ಶಿಫ್ಟ್ ಆಗಲಿದ್ದಾರೆ ದರ್ಶನ್: ಈ ಜೈಲಿನ ವಿಶೇಷತೆ ಏನು

Krishnaveni K
ಸೋಮವಾರ, 26 ಆಗಸ್ಟ್ 2024 (20:26 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ಆರೋಪದ ಬೆನ್ನಲ್ಲೇ ನಟ ದರ್ಶನ್ ಮತ್ತು ಪಟಾಲಂನನ್ನು ಮತ್ತೊಂದು ಜೈಲಿಗೆ ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ. ದರ್ಶನ್ ಮುಂದೆ ಶಿಫ್ಟ್ ಆಗಲಿರುವ ಜೈಲು ಯಾವುದು ಅದರ ವಿಶೇಷತೆ ಏನು ಇಲ್ಲಿದೆ ವಿವರ.

ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ಕೆಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಟ್ವೀಟ್ ಮುಖಾಂತರ ದರ್ಶನ್ ರನ್ನು ಬೇರೆ ಜೈಲಿಗೆ ವರ್ಗಾಯಿಸಲು ಆದೇಶಿಸಿದ್ದೇನೆ ಎಂದಿದ್ದಾರೆ.

ಇದರ ಬೆನ್ನಲ್ಲೇ ದರ್ಶನ್ ಮತ್ತು ಕೆಲವು ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾಯಿಸಲು ತಯಾರಿ ನಡೆದಿದೆ. ಮೂಲಗಳ ಪ್ರಕಾರ ದರ್ಶನ್ ಮತ್ತು ಕೆಲವು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ಈ ಜೈಲು ಇರುವುದು ಬೆಳಗಾವಿಯಲ್ಲಿ. ಈ ಜೈಲಿಗೆ ಸಾಕಷ್ಟು ಇತಿಹಾಸವಿದೆ.

ಶತಮಾನಗಳಷ್ಟು ಹಳೆಯದಾದ ಈ ಜೈಲಿನಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಅನೇಕ ಮಹನೀಯರು ಬಂಧನ ಅನುಭವಿಸಿದ್ದಾರೆ. ಈ ಜೈಲು ಅಂಧೇರಿ ಜೈಲು ಎಂದೇ ಖ್ಯಾತವಾಗಿದೆ. ಇದು ಅತ್ಯಂತ ಹಳೆಯ ಮತ್ತು ವಿಶಾಲವಾದ ಜೈಲುಗಳಲ್ಲಿ ಒಂದಾಗಿದೆ.  1923 ರಲ್ಲಿ ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿರುವ ಜೈಲು ಇದಾಗಿದೆ.

ಹಿಂಡಲಗಾ ಜೈಲಿನಲ್ಲಿ ಈಗ ಕುಖ್ಯಾತ ಕಾಮಿ, ಹಂತಕ ಉಮೇಶ್ ರೆಡ್ಡಿ, ವೀರಪ್ಪನ್ ಗ್ಯಾಂಗ್ ನ ಸಹಚರರು, ವಿಚಾರಣಾಧೀನ ಭಯೋತ್ಪಾದಕರು ಸೇರಿದಂತೆ ಕುಖ್ಯಾತರ ಪಟ್ಟಿಯೇ ಈ ಜೈಲಿನಲ್ಲಿದ್ದಾರೆ. ಮರಣದಂಡನೆಗೆ ಒಳಗಾಗುವ ಅಪರಾಧಿಗಳನ್ನು ಇಲ್ಲಿ ಕೂಡಿಹಾಕಲಾಗುತ್ತದೆ.  ಈ ಜೈಲಿನಲ್ಲೂ ಆರೋಪಿಗಳಿಗೆ ಬೇಡಿದ್ದು ನೀಡಿದ್ದ ಹಲವು ಪ್ರಕರಣಗಳು ವರದಿಯಾಗಿತ್ತು. ಆದರೆ ಈಗ ದರ್ಶನ್ ಆಂಡ್ ಗ್ಯಾಂಗ್ ಇಲ್ಲಿಗೆ ಶಿಫ್ಟ್ ಆಗುತ್ತಾರೆಯೇ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ