Select Your Language

Notifications

webdunia
webdunia
webdunia
webdunia

ನಟ ದರ್ಶನ್ ನಿವಾಸ ತೆರವುಗೊಳಿಸುವುದು ಖಚಿತ

ನಟ ದರ್ಶನ್ ನಿವಾಸ ತೆರವುಗೊಳಿಸುವುದು ಖಚಿತ
ಬೆಂಗಳೂರು , ಶುಕ್ರವಾರ, 26 ಆಗಸ್ಟ್ 2016 (13:30 IST)
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿವಾಸದ ಬಳಿ ರಾಜಕಾಲುವೆ ಪತ್ತೆಯಾಗಿದೆ ಎಂದು ಬಿಬಿಎಂಪಿ ಮೇಯರ್ ಮಂಜುನಾಥ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನಟ ದರ್ಶನ್ ನಿವಾಸದ ಬಳಿ ರಾಜಕಾಲುವೆ ಇರುವುದನ್ನು ಕಂದಾಯ ಇಲಾಖೆ ಅಧಿಕಾರಿಗಳು ದೃಢಿಕರಿಸಿದ್ದಾರೆ ಎಂದು ಹೇಳಿದರು.
 
ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿರುವವರು ಯಾರೇ ಆಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಬಿಬಿಎಂಪಿ ಮೇಯರ್ ಮಂಜುನಾಥ್ ರೆಡ್ಡಿ ಖಡಕ್ ಆಗಿ ಹೇಳಿರುವ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿವಾಸ ತೆರವುಗೊಳಿಸುವುದು ನಿಶ್ಚಿತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಈಶ್ವರಪ್ಪಗೆ ಟಾಂಗ್ ನೀಡಲು ಬಿಎಸ್‌ವೈ ಸಜ್ಜು!