Webdunia - Bharat's app for daily news and videos

Install App

ಪ್ರವಾಸದ ವೇಳೆ ನಟ ದಿಗಂತ್ ಗಂಭೀರ ಗಾಯ, ಬೆಂಗಳೂರಿಗೆ ಏರ್‌ ಲಿಫ್ಟ್!

Webdunia
ಮಂಗಳವಾರ, 21 ಜೂನ್ 2022 (20:37 IST)
ಸ್ಯಾಂಡಲ್‌ ವುಡ್‌ ನ ಸ್ಟಾರ್‌ ನಟ ದಿಗಂತ್ ಗೋವಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಏರ್‌ ಲಿಫ್ಟ್‌ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ.
ಗೋವಾ ಪ್ರವಾಸಕ್ಕೆ ಕುಟುಂಬದ ಜೊತೆ ತೆರಳಿದ್ದ ದಿಗಂತ್, ಗೋವಾದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ  ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ.
ಗೋವಾದಲ್ಲೆ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್  ಆಸ್ಪತ್ರೆಗೆ ದಿಗಂತ್ ಅವರನ್ನು ಕರೆ ತರಲಾಗುವುದು ಎಂದು ಕುಟುಂಬದವರು ಹೇಳಿದ್ದಾರೆ.
ನಟ ದಿಗಂತ್ಗೆ ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ತೆರಳಿದ್ದರು. ಆದರೆ ಗೋವಾದಲ್ಲಿ ಈ ಅವಘಡ ಸಂಭವಿಸಿದೆ. ಸಮ್ಮರ್ ಶಾಟ್ ಮಾಡುವ ವೇಳೆ ದಿಗಂತ್ ಅವರ ಕತ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.  
ಕೆಲವು  ವರ್ಷಗಳ ಹಿಂದೆ ವಿದೇಶದಲ್ಲಿ ದಿಗಂತ್ ಚಿತ್ರವೊಂದರ ಚಿತ್ರೀಕರಣ ನಡೆಸುವಾಗ ದುರ್ಘಟನೆಯೊಂದು ನಡೆದಿತ್ತು. ಈ ಚಿತ್ರೀಕರಣದ ವೇಳೆ ದಿಗಂತ್ ಕಣ್ಣಿಗೆ ಹಾನಿಯಾಗಿತ್ತು. ಸ್ವತಃ ದಿಗಂತ್ ಅವರೇ ಈ ಘಟನೆಯನ್ನು ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments