Webdunia - Bharat's app for daily news and videos

Install App

`ಸಿದ್ದಗಂಗಾ ಶ್ರೀಗಳಿಗೆ ಯಾರು ಭಾರತರತ್ನ ಕೊಡಬೇಕಿಲ್ಲ. ಭಾರತ ದೇಶಕ್ಕೆ ಅವರೆ ರತ್ನ’

Webdunia
ಗುರುವಾರ, 14 ಸೆಪ್ಟಂಬರ್ 2017 (19:08 IST)
ಸಿದ್ದಗಂಗಾ ಶ್ರೀಗಳಿಗೆ ಯಾರು ಭಾರತರತ್ನ ಕೊಡಬೇಕಿಲ್ಲ. ಭಾರತ ದೇಶಕ್ಕೆ ಅವರೆ ರತ್ನ ಎಂದು ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಸಿದ್ದಗಂಗಾ ಶ್ರೀಗಳಂತಹ ಮಹನೀಯರನ್ನ ಪಡೆದ ನಾವೇ ಧನ್ಯ. ಅವರನ್ನ ಅವಮಾನಿಸೋದು ಒಂದೆ ಶಿವನನ್ನ ಅವಮಾನೀಸೋದು ಒಂದೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
 

ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿದ್ದಗಂಗಾ ಶ್ರೀಗಳು ಲಿಂಗಾಯತ ಧರ್ಮಕ್ಕೆ ಸಮ್ಮತಿ ಸೂಚಿಸಿದ್ದರು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದರು. ಬಳಿಕ ಮಠದಿಂದಲೇ ಪತ್ರಿಕಾ ಹೇಳಿಕೆ ಬಿಡುಗಡೆಯಾಗಿತ್ತು. ಸಚಿವರು ನಮ್ಮ ಹೇಳಿಕೆ ತಿರುಚಿದ್ದಾರೆಂದು ಉಲ್ಲೇಖಿಸಿದ್ದರಿಂದ ಸಚಿವರು ಭಾರೀ ಮುಜುಗರಕ್ಕೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಾತೆ ಮಹಾದೇವಿ, ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಆಮಿಷವೊಡ್ಡಿ ಮಾತು ಬದಲಿಸಲಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಕುರಿತಂತೆ ಮಾತೆ ಮಹಾದೇವಿ ವಿರುದ್ಧ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments