Select Your Language

Notifications

webdunia
webdunia
webdunia
webdunia

ನಟ ಎಸ್. ಮಹೇಂದರ್ ಕಾಂಗ್ರೆಸ್ ಗೆ ಬಾಯ್ ಬಾಯ್ ಹೇಳಿ, ಸೇರಿದ ಪಕ್ಷ ಯಾವುದು ಗೊತ್ತಾ…?

ನಟ ಎಸ್. ಮಹೇಂದರ್ ಕಾಂಗ್ರೆಸ್ ಗೆ ಬಾಯ್ ಬಾಯ್ ಹೇಳಿ, ಸೇರಿದ ಪಕ್ಷ ಯಾವುದು ಗೊತ್ತಾ…?
ಬೆಂಗಳೂರು , ಗುರುವಾರ, 22 ಫೆಬ್ರವರಿ 2018 (07:18 IST)
ಬೆಂಗಳೂರು : ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಿನಿಮಾ ತಾರೆಯರು ಕೂಡ ರಾಜಕೀಯ ಕಣಕ್ಕಿಳಿಯುತ್ತಿದ್ದು, ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಎಸ್. ಮಹೇಂದರ್ ಅವರು ಕಾಂಗ್ರೆಸ್ ತೊರೆದು ಅಧಿಕೃತವಾಗಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.


ಬುಧವಾರ ನಗರದ ಪಕ್ಷದ ಕಚೇರಿ ಜೆಪಿಭವನದಲ್ಲಿ ಜೆಡಿಎಸ್‌ ಪಕ್ಷದ ಬಾವುಟ ನೀಡುವುದರ ಮೂಲಕ ಸ್ವಾಗತಿಸಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,’ ಸಿನಿಮಾ ವಿತರಕರಾಗಿದ್ದ ಸಮಯದಿಂದಲೂ ಮಹೇಂದರ್‌ ಪರಿಚಯ ಇದೆ. ಅವರ ಹಲವು ಸಿನಿಮಾಗಳಿಗೆ ವಿತರಕನಾಗಿ ಕೆಲಸ ಮಾಡಿದ್ದೇನೆ. ಇದೀಗ ಕಾಂಗ್ರೆಸ್‌ ತೊರೆದು ನಾನಾ ಕಾರಣಗಳಿಂದಾಗಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಅವರ ಸೇವೆಯನ್ನು ಪಕ್ಷವು ಪೂರ್ತಿಯಾಗಿ ಸದ್ಬಳಕೆ ಮಾಡಿಕೊಳ್ಳಲಿದೆ. ಪಕ್ಷಕ್ಕೆ ಮಹೇಂದರ್‌ ಅವರು ಯಾವುದೇ ಬೇಡಿಕೆ ಇಟ್ಟು ಬಂದಿಲ್ಲ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಸದುದ್ದೇಶದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಆಗಮಿಸಿದ್ದಾರೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟ ಕಮಲ್ ಹಾಸನ್ ತಮ್ಮ ಪಕ್ಷದ ಚಿಹ್ನೆಯ ಕುರಿತು ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದೇನು…?