Select Your Language

Notifications

webdunia
webdunia
webdunia
webdunia

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ನೀನಾಸಂ ಸತೀಶ್ ಗರಂ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ನೀನಾಸಂ ಸತೀಶ್ ಗರಂ
ಬೆಂಗಳೂರು , ಬುಧವಾರ, 2 ಅಕ್ಟೋಬರ್ 2019 (15:34 IST)

ಬರಹಗಾರ, ಚಿಂತಕ ಚಕ್ರವರ್ತಿ ಸೂಲೆಬೆಲೆ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರೋ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟ ಕೂಡ ತಮ್ಮ ಅಸಮಧಾನವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ.

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಹೆಚ್ಚಾಗಿ ತಲೆ ದೋರಿ ಅಪಾರ ನಷ್ಟಕ್ಕೆ ಕಾರಣವಾಗಿದೆ. ಆದರೂ ಪರಿಹಾರ ನೀಡೋದಕ್ಕೆ ಮೀನಮೇಷ ಎಣಿಸುತ್ತಿರೋ ಕೇಂದ್ರದ ಸರಕಾರದ ವಿರುದ್ಧ ನಟ ನೀನಾಸಂ ಸತೀಶ್ ಸಖತ್ ವ್ಯಂಗ್ಯವಾಡಿದ್ದಾರೆ.

ನಾನು ನಿಮ್ಮ ಯಾವ ಪಕ್ಷದವನೂ ಅಲ್ಲ, ನನ್ನದು ಮನುಷ್ಯ ಪಕ್ಷ, ಬಡವರ ಪಕ್ಷ, ಹಸಿದವರ ಪಕ್ಷ. ಯಾವ ಸರ್ಕಾರವಾದರೂ ಕೇಳುವ ಹಕ್ಕು ನನಗಿದೆ. ನೆರೆ ಸಂತ್ರಸ್ತರ ವಿಚಾರದಲ್ಲಿ ನಿಮ್ಮ ಪಕ್ಷಗಳನ್ನು ಬದಿಗಿಟ್ಟು, ಅವರ ಕಷ್ಟಗಳಿಗೆ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡುವ ಬುದ್ಧಿ ಬರಲಿ.  ಹೀಗಂತ ನೀನಾಸಂ ಸತೀಶ್ ಟ್ವೀಟ್ಟರ್ ನಲ್ಲಿ ಬರೆದಿದ್ದಾರೆ.

ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದರೂ ಕೇಂದ್ರದಿಂದ ನೆರೆ ಪರಿಹಾರ ಕೊಡಿಸೋಕೆ ಮುಂದಾಗದಿರೋದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇಸ್ರೋ ವಿಜ್ಞಾನಿಯ ಭೀಕರ ಕೊಲೆ