Select Your Language

Notifications

webdunia
webdunia
webdunia
webdunia

ಕಾವೇರಿಗಾಗಿ ಪ್ರಧಾನಿಗೆ ಪತ್ರ ಬರೆದ ರಮ್ಯಾ

ಕಾವೇರಿಗಾಗಿ ಪ್ರಧಾನಿಗೆ ಪತ್ರ ಬರೆದ ರಮ್ಯಾ
ಬೆಂಗಳೂರು , ಭಾನುವಾರ, 25 ಸೆಪ್ಟಂಬರ್ 2016 (11:29 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ಉಭಯ ರಾಜ್ಯಗಳಲ್ಲಿ ಅನೇಕ ಹೋರಾಟ ನಡೆದಿವೆ. ಆದರೆ, ರಾಜ್ಯದಲ್ಲಿ ರಾಜ್ಯದಲ್ಲಿ ನಡೆದ ಹೋರಾಟದಲ್ಲಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಲ್ಗೊಂಡಿರಲಿಲ್ಲ. ಅದಕ್ಕಾಗಿ ಅವರ ವಿರುದ್ಧ ಸಾಕಷ್ಟು ಅಸಮಾಧಾನ ವ್ಯಕ್ತವಾಗಿತ್ತು. ಇದೀಗ ಕಾವೇರಿ ವಿವಾದದಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಕೋರಿ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿರುವುದಾಗಿ ರಮ್ಯಾ ಹೇಳಿಕೊಂಡಿದ್ದಾರೆ.
 
ಕರ್ನಾಟಕ ಹಾಗೂ ತಮಿಳುನಾಡು ಮಧ್ಯ ಕಾವೇರಿ ನದಿ ನೀರಿನ ಹಂಚಿಕೆ ಕುರಿತು ತಪ್ಪು ಒಪ್ಪಂದದಿಂದಾಗಿ ಈ ವಿವಾದ ಉಂಟಾಗಿದೆ. ಈ ಒಪ್ಪಂದವನ್ನು ಬದಲಾಯಿಸದೇ ಹೋದರೆ ಕಾವೇರಿ ವಿವಾದ ಇತ್ಯರ್ಥವಾಗುವುದು ಸಾಧ್ಯವಿಲ್ಲ. ಹೀಗಾಗಿ ಕಾವೇರಿ ವಿಷಯದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
 
ಕರ್ನಾಟಕ ಹಾಗೂ ತಮಿಳುನಾಡಿನ ಮುಖ್ಯಮಂತ್ರಿಯವರನ್ನು ಕರೆದು ಚರ್ಚೆ ನಡೆಸಿ ಕಾವೇರಿ ವಿವಾದಕ್ಕೆ ಅಂತ್ಯ ಹಾಡಬೇಕು. ಉಭಯ ರಾಜ್ಯಗಳು ಒಪ್ಪುವ ಹಾಗೇ ಪ್ರಧಾನಿ ನರೇಂದ್ರ ಮೋದಿ ಅವರು ತೀರ್ಮಾನ ಕೈಗೊಳ್ಳಬೇಕು ಎಂದು ರಮ್ಯಾ ಪತ್ರದಲ್ಲಿ ಒತ್ತಾಯಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಾರಿಗೆ ನೌಕರರಿಗೆ ಸಂತಸದ ಸುದ್ದಿ: ವೇತನದಲ್ಲಿ ಶೇ.12.5ರಷ್ಟು ಹೆಚ್ಚಳ